ವಂಟಮೂರಿ ಘಟನೆ ನೊಂದ ಕುಟುಂಬಕ್ಕೆ ಸೂಕ್ತ ರಕ್ಷಣೆಗೆ – ಭಾರತೀಯ ಮಹಿಳಾ ಒಕ್ಕೂಟದ ರಾಜ್ಯ ಕಾರ್ಯದರ್ಶಿಗಳು ಕೆ.ರೇಣುಕಾ ಆಗ್ರಹ.
ಕೊಟ್ಟೂರು ಡಿಸೆಂಬರ್.12

ವಿಜಯನಗರ ಜಿಲ್ಲೆಯ ಕೊಟ್ಟೂರು ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬಳ ಮೇಲೆ ಅಮಾನುಷ್ಯ ಕೃತ್ಯ ನಡೆಸಿ ಕಂಬಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಚಿತ್ರ ಹಿಂಸೆ ಕ್ರೌರ್ಯ ಮೆರೆದ ಪುಂಡರನ್ನು ಗಡಿಪಾರು ಮಾಡಬೇಕೆಂದು ಭಾರತೀಯ ಮಹಿಳಾ ಒಕ್ಕೂಟದ ರಾಜ್ಯ ಕಾರ್ಯದರ್ಶಿಗಳು ಕೆ. ರೇಣುಕಾ ಅವರು ಆಗ್ರಹಿಸಿದ್ದಾರೆ.ಮಗನ ಪ್ರೇಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡೀ ಕುಟುಂಬದ ಮನೆ ಧ್ವಂಸ ಮಾಡಿ ಸಿಕ್ಕಾಪಟ್ಟೆ ಹಲ್ಲೆ ಮಾಡಿರುವುದನ್ನು ಇಡೀ ಮಾನವ ಕುಲವೆ ತಲೆ ತಗ್ಗಿಸುವಂತಹ ಘಟನೆ ಇದಾಗಿದ್ದು, ತಪ್ಪಿಸ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಆ ನೊಂದ ಕುಟುಂಬಕ್ಕೆ ತಕ್ಷಣ ರಾಜ್ಯ ಸರಕಾರ ಪರಿಹಾರ ನೀಡಬೇಕು. ಹಾಗೂ ಕುಟುಂಬದವರಿಗೆ ಸೂಕ್ತ ಪೋಲಿಸ್ ಬಂದೋಬಸ್ತ್ ನೀಡಬೇಕು. ಮತ್ತು ಜೀವ ಭಯದಿಂದ ಓಡಿಹೋದ ಆ ಪ್ರೇಮಿಗಳನ್ನು ರಕ್ಷಿಸಿ ಯಾವುದೇ ದುರ್ಘಟನೆ ಸಂಬಂವಿಸದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರಕಾರಕ್ಕೆಭಾರತೀಯ ಮಹಿಳಾ ಒಕ್ಕೂಟದ ರಾಜ್ಯ ಕಾರ್ಯದರ್ಶಿಗಳು ಕೆ. ರೇಣುಕಾ ಅವರು ಪತ್ರಿಕೆಗೆ ಮೂಲಕ ಆಗ್ರಹಿಸಿ ಒತ್ತಾಯಿಸಿದ್ದಾರೆ.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ ಕೊಟ್ಟೂರು