ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ – ಶಾಸಕ ರಾಜುಗೌಡ. ಪಾಟೀಲ.

ದೇವರ ಹಿಪ್ಪರಗಿ ಮೇ.28

ದೇವರ ಹಿಪ್ಪರಗಿ ಪಟ್ಟಣದಲ್ಲಿ ಬಹು ದಿನದ ಬೇಡಿಕೆ ಯಾದ ಇಂದಿರಾ ಕ್ಯಾಂಟೀನ್ ನ್ನು ಬಡವರಿಗೆ, ವ್ಯಾಪಾರಿಗಳಿಗೆ ಹಾಗೂ ರೈತರಿಗೆ ಅನುಕೂಲವಾಗಿದೆ. ಪಟ್ಟಣದಲ್ಲಿ ನಿರ್ಮಾಣದ ಇಂದಿರಾ ಕ್ಯಾಂಟೀನ್ ನ್ನು ದೇವರ ಹಿಪ್ಪರಗಿ ಮತ ಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದರಿ ಸಾಲವಡಗಿ ಯವರು ಇಂದು ಉದ್ಘಾಟನೆ ಮಾಡಿ ಮಾತನಾಡಿದರು.

ದೇವರ ಹಿಪ್ಪರಗಿ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಇಂಗಳಗಿ ಗ್ರಾಮದಲ್ಲಿ ಹೊಸದಾಗಿ ನಿರ್ಮಾಣದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಿದರು.

ಹಾಗೂ ಪ್ರಗತಿ ಕಾಲೋನಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಇಪ್ಪತ್ತು ಲಕ್ಷದ ವೆಚ್ಚದ ಡಾ, ಬಾಬು ಜಗಜೀವನ್ ರಾಮ್ ಸಮುದಾಯ ಭವನದ ಭೂಮಿ ಪೂಜೆ ಮಾಡಿದ ಶಾಸಕರಾದ ರಾಜುಗೌಡ ಪಾಟೀಲ.

ಈ ಸಮಾರಂಭದಲ್ಲಿ, ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಜಯಶ್ರೀ ದೇವಣಗಾಂವ, ಉಪಾಧ್ಯಕ್ಷರಾದ ರಮೇಶ ಮಸಬಿನಾಳ ಮುಖ್ಯಾಧಿಕಾರಿಗಳಾದ ಸುರೇಖಾ ಬಾಗಲಕೋಟ, ಹಾಗೂ ಲ್ಯಾಂಡ್ ಆರ್ಮಿ ಇಲಾಖೆಯ ಎಇಇ ರಾಜಶೇಖರ ಎ.ಎಲ್ ಹಾಗೂ ಪಟ್ಟಣ ಪಂಚಾಯತಿ ಸದಸ್ಯರು, ಹಾಗೂ ಇಂಗಳಗಿ ಗ್ರಾಮದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button