ನರೇಗಾ ಕಾಮಗಾರಿಗಳ ಸ್ಥಳಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ.
ಬಾಗಲಕೋಟ ಅಕ್ಟೋಬರ್.7

ಜಿಲ್ಲೆಯ ಬರಗಾಲ ಪೀಡಿತ ಪ್ರದೇಶಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿತ್ತು, ಹುನಗುಂದ ತಾಲೂಕಿನ ಕೂಡಲಸಂಗಮ, ರಕ್ಕಸಗಿ, ಸೂಳೇಭಾವಿ ಸೇರಿದಂತೆ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಮಾಹಿತಿಯನ್ನು ಸಂಗ್ರಹಿಸಿದರು.ಬಳಿಕ ಕೂಡಲ ಸಂಗಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಡ್ಡಿಯರ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, ಕೇಂದ್ರ ಅಧ್ಯಯನ ತಂಡ ಭೇಟಿ ಪರಿಶೀಲನೆ ನಡೆಸಿದರು. ಬಳಿಕ ಸೂಳೇಭಾವಿ ಗ್ರಾಮ ಪಂಚಾಯಿತಿ ದೇವಿಕೇರೆ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, ಕೇಂದ್ರ ಅಧ್ಯಯನ ತಂಡ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಪಂ ಸಿಇಒ ಶಶಿಧರ ಕುರೇರ, ಜಿಪಂ ಕಾರ್ಯದರ್ಶಿ ಅಮರೇಶ್ ನಾಯಕ್, ಎಸಿ ಶ್ವೇತಾ ಬೀಡಿಕರ, ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾರ್ಯ ನಿರ್ವಾಹಕ ಅಧಿಕಾರಿ ಮುರಳಿ ದೇಶಪಾಂಡೆ, ಸಹಾಯಕ ನಿರ್ದೇಶಕ ಮಹಾಂತೇಶ್ ಕೋಟಿ, ಅವಳಿ ತಾಲೂಕಿನ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.