ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ – ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ.
ಭೀಮರಾಯನಗುಡಿ ಮಾ.24

ಇಂದು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಭಿಮರಾಯನಗುಡಿಯಲ್ಲಿ ಇರುವ KBJNL ಕಛೇರಿ ಎದುರುಗಡೆಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ರೈತರಿಗೆ ಎಪ್ರಿಲ್ 10 ರ ವರೆಗೆ ಮಲ್ಲಾಬಾದ ಏತ ನೀರಾವರಿ ಕಾಲುವೆಗೆ ನೀರು ಹರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ಕರ್ನಾಟಕ (ರಿ) ವತಿಯಿಂದ ಬೆಂಬಲ ಸೂಚಿಸಿ ಹೋರಾಟದಲ್ಲಿ ಭಾಗವಹಿಸಿದ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಶ್ರವಣಕುಮಾರ.ಡಿ ನಾಯಕ, ಜೇವರ್ಗಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಹಣಮಂತ ಕುಳಗೇರಿ, ನಿಂಗಣ್ಣ.ಚಿಗರಹಳ್ಳಿ, ವಿರೇಶ ಗುತ್ತೇದಾರ ಮತ್ತು ಇನ್ನಿತರರು ಪಾಲ್ಗೊಂಡಿದ್ದರು ಎಂದು ವರದಿಯಾಗಿದೆ.