ಕಬ್ಬಿನ ಗದ್ದೆಗೆ ಬೆಂಕಿ – 2.ಲಕ್ಷ ಮೊತ್ತದ ಕಬ್ಬು ಸುಟ್ಟು ಭಸ್ಮ.

ಬಣವಿಕಲ್ಲು ಡಿಸೆಂಬರ್.28

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ‍ ನಿಂದಾಗಿ ಕಬ್ಬಿನ ಗದ್ದಗೆ ಬೆಂಕಿ ಬಿದ್ದು, ಸುಮಾರು 2 ಲಕ್ಷ ರೂ.ಮೊತ್ತದ ಕಬ್ಬು ಸುಟ್ಟು ಕರಕಲಾದ ಘಟನೆ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಬಣವಿಕಲ್ಲು ಗ್ರಾಮದ ರೈತ ಕೆ ನಾಗಭೂಷಣ ತಂದೆ ಸದಾನಂದಪ್ಪ ಇವರಿಗೆ ಸೇರಿದ 4:30 ಎಕರೆ ಕಬ್ಬು ಬೆಳೆದ ಜಮೀನಿನಲ್ಲಿ ಸುಮಾರು 2:30 ಎಕರೆ ಕಬ್ಬಿನ ಬೆಳೆ ಸುಟ್ಟು ಭಸ್ಮವಾಗಿದೆ. 5 ಲಕ್ಷ ರೂ.ಮೊತ್ತದ ಕಬ್ಬು ಬೆಳೆದಿದ್ದರು. ಮಂಗಳವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ‍ ನಿಂದಾಗಿ ಕಬ್ಬಿನ ಗದ್ದೆಗೆ ಬೆಂಕಿ ಹೊತ್ತಿಕೊಂಡು 2 ಲಕ್ಷ ರೂ.ಬೆಲೆ ಬಾಳುವ ಕಬ್ಬು ಸುಟ್ಟು ಹೋಗಿದೆ.

ಸ್ಥಳೀಯ ಸಾರ್ವಜನಿಕರು ಹಾಗೂ ನೀರಿನ ಟ್ಯಾಂಕರ್, ಜೆಸಿಬಿ ಯಂತ್ರದಿಂದ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಸುದ್ದಿ ತಿಳಿದು ಕೂಡ್ಲಗಿ ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವುದರ ಮೂಲಕ ಹೆಚ್ಚಿನ ಹಾನಿಯನ್ನು ತಡೆದಿದ್ದಾರೆ. ಈ ಸಂಬಂಧ ಅಗ್ನಿ ಶಾಮಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ಬೆಳೆ ನಷ್ಟಕ್ಕೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ರೈತರ ಸಂಘದ ತಾಲ್ಲೂಕು ಅಧ್ಯಕ್ಷರು ಹಾಗೂ ಉಪಾಧ್ಯಕ್ಷ, ಮತ್ತು ಬೆಳೆ ನಷ್ಟಾದ ರೈತ ಒತ್ತಾಯಿಸಿದ್ದಾರೆ.ಹೋಬಳಿ

ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button