ಸ್ವಾಮಿ ವಿವೇಕಾನಂದರನ್ನು ಜಗದ್ವಿಖ್ಯಾತ ಮಾಡಿದ್ದು ಚಿಕಾಗೋ ಭಾಷಣ – ಶ್ರೀಮತಿ ಜಯಮ್ಮ. ನರಸಿಂಹಮೂರ್ತಿ ಅಭಿಪ್ರಾಯ.

ಚಳ್ಳಕೆರೆ ಮೇ.30

ಸ್ವಾಮಿ ವಿವೇಕಾನಂದರನ್ನು ಜಗದ್ವಿಖ್ಯಾತ ಮಾಡಿದ್ದು 1893 ರ ಸೆಪ್ಟೆಂಬರ್ 11 ರಂದು ಅಮೇರಿಕಾದ ಚಿಕಾಗೋ ನಗರದಲ್ಲಿ ಮಾಡಿದ ಭಾಷಣ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರು ಹಾಗೂ ನಿವೃತ್ತ ಶಿಕ್ಷಕಿ ಶ್ರೀಮತಿ ಜಯಮ್ಮ ನರಸಿಂಹಮೂರ್ತಿ ತಿಳಿಸಿದರು. ತ್ಯಾಗರಾಜ ನಗರದ ಶ್ರೀಮತಿ ನಂಜಮ್ಮ ಕೆಂಚಪ್ಪ ಶಿಕ್ಷಕರ ಸವಿತಾ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು “ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ” ದ ಬಗ್ಗೆ ಉಪನ್ಯಾಸ ನೀಡಿದರು.

ಅಮೇರೀಕಾದ ಚಿಕಾಗೋ ನಗರದಲ್ಲಿ ನಡೆದ ಸರ್ವ ಧರ್ಮ ಸಮ್ಮೇಳನದಲ್ಲಿ ಸನಾತನ ಹಿಂದೂ ಧರ್ಮದ ಪ್ರತಿ ನಿಧಿಯಾಗಿ ಭಾಗವಹಿಸಿ ಸ್ವಾಮಿ ವಿವೇಕಾನಂದರು ಮಾಡಿದ ಕೆಲವೇ ನಿಮಿಷಗಳ ಭಾಷಣ ಜಗತ್ತಿನ ಜನರ ಮೇಲೆ ಬೀರಿದ ಪ್ರಭಾವ ಅಗಾಧವಾದದ್ದು, ಆ ಭಾಷಣದ ವಿಚಾರ ಧಾರೆಗಳು ಇಂದಿಗೂ ಸಹ ಪ್ರಸ್ತುತವಾಗಿವೆ ಎಂದರು. ಈ ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮ ರಕ್ಷಾ ಸ್ತೋತ್ರ ಪಠಣ, ವಿಶೇಷ ಭಜನೆ ಹಾಗೂ “ಶ್ರೀಶಾರದಾದೇವೀ ಜೀವನ ಗಂಗಾ” ಗ್ರಂಥ ಪಾರಾಯಣ ಕಾರ್ಯಕ್ರಮವನ್ನು ಯತೀಶ್.ಎಂ ಸಿದ್ದಾಪುರ ನಡೆಸಿ ಕೊಟ್ಟರು.

ಈ ಸತ್ಸಂಗ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಹೆಚ್ ಲಕ್ಷ್ಮೀದೇವಮ್ಮ, ಅನುಸೂಯ ರಾಘವೇಂದ್ರ, ಸರ್ವಮಂಗಳ, ತಿಪ್ಪಮ್ಮ ಉಮಾಶಂಕರ್, ಶ್ರೀಮತಿ ಎಂ ಗೀತಾ ನಾಗರಾಜ್, ಗೀತಾ ವೆಂಕಟೇಶ್ ರೆಡ್ಡಿ, ಬಿ.ಟಿ ಗಂಗಾಂಬಿಕೆ, ಗಿರಿಜಾ ಜಗದೀಶ್, ಲಕ್ಷ್ಮೀದೇವಮ್ಮ, ಸರಸ್ವತಿ, ರಾಧಾ, ಸಹನ, ಈಶಾನ್ ಸೇರಿದಂತೆ ಸದ್ಭಕ್ತರು ಪಾಲ್ಗೊಂಡಿದ್ದರು.

ವರದಿ:ಯತೀಶ್.ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button