ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ವಿಜಯನಗರ ಜಿಲ್ಲಾ ಹೋರಾಟಗಾರರಿಂದ ಮನವಿ.

ಹೊಸಪೇಟೆ ಜುಲೈ.27

ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಒತ್ತಾಯಿಸಿ.ದಿನಾಂಕ: 27 ಜೂನ್ 2023 ರಂದು ರಾಜ್ಯದಾದ್ಯಂತ ಏಕಕಾಲದಲ್ಲಿ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ.ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಸುಮಾರು ಮೂರು ತಿಂಗಳುಗಳ ಹಿಂದೆ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿದೆ.ಕುಕಿ ಜೋ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಸಂಪೂರ್ಣ ಬೆತ್ತಲು ಮಾಡಿ ಅವರ ಮೇಲೆ ಗುಂಪೊಂದು ಲೈಂಗಿಕ ದೌರ್ಜನ್ಯ ನಡೆಸಿದ ವಿಡಿಯೋ ಒಂದು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.ಇದು ಮಣಿಪುರ ಹಿಂಸಾಚಾರದ ಅಘಾತಕಾರಿ ಮುಖವನ್ನು ತೆರೆದಿಟ್ಟಿದೆ. ಹಿಂಸಾಚಾರದ ಕರಾಳ ಮುಖವನ್ನು ಇಡೀ ದೇಶಕ್ಕೆ ತೋರಿಸಿದೆ. ಮಹಿಳೆಯರಿಗೆ ಯಾವ ಮಟ್ಟದ ಅವಮಾನ ಮಾಡುವುದಕ್ಕೂ ಹೇಸದ ಮನಸ್ಥಿತಿ, ಪೊಲೀಸರು ಮತ್ತು ಅಧಿಕಾರ ಸ್ಥಾನದಲ್ಲಿರುವವರ ಅಸಡ್ಡೆ, ಹಿಂಸೆಗೆ ನೀಡಿದ ಕುಮ್ಮಕ್ಕು, ಮಧ್ಯ ಪ್ರವೇಶ ಮಾಡಲು ಕೇಂದ್ರ ಸರ್ಕಾರದ ಹಿಂದೇಟು ಮತ್ತು ಎಲ್ಲಕ್ಕಿಂತ ಮಾನವೀಯತೆಯನ್ನೂ ಮರೆತಿರುವ ಸ್ಥಿತಿ ಎಲ್ಲದಕ್ಕೂ ಈ ವಿಡಿಯೋ ಕನ್ನಡಿ ಹಿಡಿದಿದೆ.ಈ ಕೃತ್ಯವು ಮಣಿಪುರ ಮಾತ್ರವಲ್ಲ ಇಡೀ ದೇಶ ಬೆಚ್ಚಿ ಬೀಳಿಸುವಂತೆ ಮಾಡಿದ ಈ ಘಟನೆಯ ಪೂರ್ಣ ಹೊಣೆಗಾರಿಕೆಯನ್ನು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳೇ ಹೊತ್ತುಕೊಳ್ಳಬೇಕು.ಕಾನೂನಿನ ಆಡಳಿತಕ್ಕೆ ಒಳಪಟ್ಟ ಯಾವುದೇ ನಾಗರೀಕ ಸಮಾಜವು ಇಂತಹ ಹೀನ ಕೃತ್ಯ ಎಸಗಿದವರ ಮೇಲೆ ತಕ್ಷಣವೇ ಕ್ರಮ ಕೈಗೊಳ್ಳುತ್ತಿತ್ತು ಮೇ ತಿಂಗಳಲ್ಲಿ ಎಫ್ ಐ ಆರ್ ದಾಖಲಾಗಿದೆ ಮತ್ತು ಘಟನೆಯು ಹೇಗೆ ನಡೆದಿದೆ ಎಂಬ ವಿಡಿಯೋ ಅದರಲ್ಲಿದೆ. ವಿಡಿಯೋ ಕಳೆದ ವಾರ ಸಾಮಾಜಿಕ ಜಾಲತಾಣಳಲ್ಲಿ ಹರಿದಾಡುವವರೆಗೆ ಯಾವುದೇ ತನಿಖೆ ನಡೆದಿರಲಿಲ್ಲ.ಯಾರನ್ನು ಬಂಧಿಸಿರಲಿಲ್ಲ. ಇದನ್ನು ಸೂಕ್ಷ್ಮವಾಗಿ ಗಮನಿಸಿದಾಗ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ತಪ್ಪಿತಸ್ಥರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆಯಲ್ಲದೆ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಇಷ್ಟೆಲ್ಲಾ ನಡೆದಿರುವಾಗ ವಿಶ್ವಗುರು ಎಂದು ಹೇಳುತ್ತಿರುವ ಪ್ರಧಾನಿ ಮೋದಿಯವರೇಕೆ ಮೌನ ವಹಿಸಿದ್ದಾರೆ ಎನ್ನುವುದು ಸಹ ಅನುಮಾನಕ್ಕೀಡು ಮಾಡಿದೆ.ಮುಖ್ಯಮಂತ್ರಿ ಬಿರೇನ್ ಸಿಂಗ್ ರವರು ತಪ್ಪಿಸ್ತರಿಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಈ ರೀತಿಯ ಘಟನೆಗಳ ಹೊಣೆಯನ್ನು ಮುಖ್ಯಮಂತ್ರಿಗಳೇ ಹೊತ್ತು ಕೊಳ್ಳಬೇಕಾಗುತ್ತದೆ. ರಾಜಕೀಯ, ಸಾಮಾಜಿಕ ಮತ್ತು ಮಾನವ ಹಕ್ಕುಗಳಿಗೆ ಸಂಬಂಧಿಸಿದ ಗಂಭೀರ ಪ್ರಶ್ನೆಗಳು ಹುಟ್ಟಲು ಈಗಿನ ಪರಿಸ್ಥಿತಿ ಕಾರಣವಾಗಿದೆ. “ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ರವರು ಗಾಢ ಕಳವಳ ವ್ಯಕ್ತಪಡಿಸಿದ್ದಾರೆ. ತಳಮಟ್ಟದಲ್ಲಿ ಏನನ್ನು ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದಾದರೆ ನ್ಯಾಯಾಲಯವು ಮಧ್ಯಪ್ರವೇಶ ಮಾಡಬೇಕಾಗುತ್ತದೆ” ಎನ್ನುವ ಎಚ್ಚರಿಕೆಯನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಸಂಬಂಧಿಸಿದ ತಮ್ಮ ಸುಧೀರ್ಘ ಮತ್ತು ನಿಗೂಢ ಮೌನವನ್ನು ಕೊನೆಗೂ ಮುರಿದಿದ್ದಾರೆ. (ಮುಖ್ಯ ನ್ಯಾಯಮೂರ್ತಿ ಮಾಡುತ್ತಿರುವ ಆಕ್ರೋಶದಿಂದ ಅವರು ಮಾತುಗಳು ಮತ್ತು ಜನರಲ್ಲಿ ಮೌನ ಮುರಿದಿರಬಹುದು) ಘಟನೆಯಿಂದ ಇಡೀ ದೇಶವೇ ನಾಚಿಕೆಯಿಂದ ತಲೆತಗ್ಗಿಸುವಂತಾಗಿದೆ. ಮತ್ತು ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲವೆಂದು ಪ್ರಧಾನಿಯವರು ಹೇಳಿದ್ದಾರೆ. ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಮಾತನಾಡಲು ಇಂತಹದೊಂದು ಘೋರ ಕೃತ್ಯ ನಡೆಯಬೇಕಾಗಿತ್ತೇ ?ಈ ಹಿನ್ನೆಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ದಿನಾಂಕ: 27.07.2023 ರಂದು ರಾಜ್ಯದಾದ್ಯಂತ ಏಕಕಾಲದಲ್ಲಿ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮೂಲಕ ಈ ಕೆಳಕಂಡ ಹಕ್ಕೊತ್ತಾಯಗಳನ್ನು ಈಡೇರಿಸಬೇಕೆಂದು ಗೌರವಾನ್ವಿತ ರಾಷ್ಟ್ರಪತಿಯವರನ್ನು ಒತ್ತಾಯಿಸುತ್ತದೆ.ಮಣಿಪುರದಲ್ಲಿ 2023 ಮೇ 4 ರಂದು ಕುಕಿ ಜೋ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಸಂಪೂರ್ಣ ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿರುವ ದುಷ್ಕರ್ಮಿಗಳನ್ನು ತಕ್ಷಣವೇ ಗಲ್ಲು ಶಿಕ್ಷೆಗೊಳಪಡಿಸಬೇಕು.ಸುಮಾರು 3 ತಿಂಗಳುಗಳಿಂದ ಹಿಂಸಾಚಾರದಿಂದ ನಲುಗಿ ಜನಾಂಗೀಯ ಸಂಘರ್ಷ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ವಿಫಲರಾಗಿರುವ ಮಣಿಪುರ ಬೀರೇನ್ ಸಿಂಗ್ ನೇತೃತ್ವದ ಸರ್ಕಾರವನ್ನು ತಕ್ಷಣವೇ ವಜಾಗೊಳಿಸಿ ರಾಷ್ಟ್ರಪತಿಯವರ ಆಡಳಿತವನ್ನು ಜಾರಿ ಮಾಡಬೇಕು.ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಫಲರಾಗಿರುವ ಮಣಿಪುರದ ಮುಖ್ಯಮಂತ್ರಿ ಬೀರೇನ್ ಸಿಂಗ್, ಕೇಂದ್ರ ಗೃಹಮಂತ್ರಿ ಅಮಿತ್‌ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಎಸ್‌. ದುರುಗೇಶ , ಶ್ರೀ ಶ್ರೀನಿವಾಸ,ಶ್ರೀಮತಿ ಲಲಿತಮ್ಮ ಹಾಗೂ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.

ತಾಲೂಕ ವರದಿಗಾರರು:ಮಾಲತೇಶ್. ಶೆಟ್ಟರ್. ಹೊಸಪೇಟೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button