ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜಿನಾಮೆ ನೀಡಬೇಕೆಂದು – ಎಂ.ಬಿ.ವ್ಹಿ.ಪಿ ಯಿಂದ ಪ್ರತಿಭಟನೆ.
ಇಂಡಿ ಜನೇವರಿ.2

ಪಟ್ಟಣದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ ರವರ ರಾಜೀನಾಮೆಗೆ ಒತ್ತಾಯಿಸಿ ಎಬಿವಿಪಿ ಸಂಘಟನೆಯಿಂದ ಬೃಹತ್ ಪ್ರತಿಭಟನೆ ಮಾಡುತ್ತಾ ಶಿಕ್ಷಣವೆಂದರೆ ‘ಮಾನವೀಯತೆಯ ವಿಕಾಸ, ಮನುಷ್ಯರಲ್ಲಿ ಪರಿ ಪೂರ್ಣತೆಯನ್ನು ತುಂಬುವುದೇ ಶಿಕ್ಷಣ, ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಹೊರ ಬರುತ್ತದೆ ಎಂದು ವಿವೇಕಾನಂದರು ಹೇಳುತ್ತಿದ್ದರು, ‘ಭಾರತದ ಎಲ್ಲ ಸಮಸ್ಯೆಗಳಿಗೂ ಶಿಕ್ಷಣ ಒಂದೇ ಪರಿಹಾರ ಎಂದು docteger wate her woor green owestetast mes seperti asing pigeon water as Doradiant ಜನ ಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆ ವಿಧಿಸಿದ್ದರು ಸಹಿತ ರಾಜ್ಯ ಸರ್ಕಾರದ ಮಂತ್ರಿಗಳಾಗಿ ಮುಂದುವರೆದಿರುವುದು ವಿಷಾದನೀಯ .ಈ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.

ಖಾಸಗಿ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ 2011 ರಲ್ಲಿ ರಾಜೇಶ ಎಕ್ಸಪೋರ್ಟ್ ಸಂಸ್ಥೆಗೆ 66 ಕೋಟಿ ರೂ ಚೆಕ್ ನೀಡಿದ್ದರು. ಆದರೆ ಆ ಚೆಕ್ ಬೌನ್ಸ್ ಆಗಿತ್ತು ಈ ಹಿನ್ನಲೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ದೂರು ದಾಖಲಿಸಿತ್ತು ಈ ನಡುವೆ ಮಧು ಬಂಗಾರಪ್ಪಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 196 ಕೋಟಿ ರೂ ದಂಡ ವಿಧಿಸಿದ್ದು, ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ ಅನುಭವಿಸಲು ನ್ಯಾಯಾಲಯ ಆದೇಶಿಸಿದೆ. ಈ ರೀತಿ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿಯು ರಾಜ್ಯದ ಶಿಕ್ಷಣ ಇಲಾಖೆಗೆ ಕಪ್ಪು ಚುಕ್ಕೆ, ಇವರು ಈ ಇಲಾಖೆಯನ್ನು ಹೇಗೆ ನಿಭಾಯಿಸಲು ಸಾಧ್ಯ? ತಕ್ಷಣವೇ ರಾಜ್ಯದ ಮುಖ್ಯಮಂತ್ರಿಗಳು ಅವರ ರಾಜೀನಾಮೆ ಪಡೆಯ ಬೇಕೆಂದು ಎಬಿವಿಪಿ ಆಗ್ರಹಿಸಿ ಇಂದು ಮಾನ್ಯ ತಹಶೀಲ್ದಾರ ಇವರಿಗೆ ಮನವಿಯನ್ನು ಸಲ್ಲಿಸಿದರು.
ಜಿಲ್ಲಾ ವರದಿಗಾರರು:ಶಿವಪ್ಪ.ಬಿ.ಹರಿಜನ.ಇಂಡಿ