ಸಡಗರದಿಂದ ಎಸ್.ಇಮಡಾಪುರ ಗ್ರಾಮ ಸಂಗಮೇಶ್ವರ ಸ್ವಾಮಿ ರಥೋತ್ಸವ.
ಎಸ್.ಇಮಡಾಪುರ ಜನೇವರಿ.2

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಎಸ್ ಇಮಡಾಪುರ ಗ್ರಾಮ ಶ್ರೀ ಸಂಗಮೇಶ್ವರ ಸ್ವಾಮಿ ರಥೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು.ಶ್ರೀ ಸಂಗಮೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನ ದಿಂದ ಸಕಲ ವಾದ್ಯಗಳೊಂದಿಗೆ ರಥದ ಬಳಿ ತಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸ್ವಾಮಿಯ ರಥದ ಮುಂದೆ ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಜಯಘೋಷ ಹಾಕಿ. ಬಾಳೆಹಣ್ಣು. ಉತ್ತುತ್ತಿ .ಮಂಡಕ್ಕಿ. ಎಸೆದು ಭಕ್ತಿ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಎಸ್ ಇಮಡಾಪುರ ಗ್ರಾಮದ ಸಮಸ್ತ ದೈವಸ್ಥರು ಸೇರಿದಂತೆ .ಹೊಸಹಳ್ಳಿ. ಪಕ್ಕದ ದಾವಣಗೆರೆ ಚಿತ್ರದುರ್ಗ ಜಿಲ್ಲೆಗಳ ಭಕ್ತರು ಸೇರಿದಂತೆ ಸುತ್ತ ಮುತ್ತಲ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು.
ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ