ವಯಸ್ಸಾದ ವೃದ್ಧರನ್ನು ಅನಾಥಾಶ್ರಮಕ್ಕೆ ಸೇರಿಸಿ ಮಾನವೀಯತೆ ಮೇರೆದೆ ಹಂಡ್ಲಿ ಗ್ರಾಮ ಪಂಚಾಯಿತಿಯ ಸದಸ್ಯರು.

ಬಳ್ಳಾರಳ್ಳಿ ಜನೇವರಿ.10

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಹಂಡ್ಲಿ ಗ್ರಾಮ ಪಂಚಾಯಿತಿಗೆ ಸೇರಿದ ಬಳ್ಳಾರಳ್ಳಿ ಬಸ್ ನಿಲ್ದಾಣದಲ್ಲಿ ಎರಡು ವರ್ಷದಿಂದ ಬಸ್ ನಿಲ್ದಾಣದಲ್ಲಿ ವಯಸ್ಸಾದ (70) ವೃದ್ದರು ಮಲಗುತ್ತಿದ್ದರು ಇದನ್ನು ನೋಡಿದ ಗ್ರಾಮಸ್ಥರು ಕರ್ನಾಟಕ ರಕ್ಷಣಾ ವೇದಿಕೆಗೆ ಫೋನ್ ಮುಖಾಂತರ ಸಂಪರ್ಕಿಸಿ ಈ ವಯಸ್ಸಾದ ವೃದ್ಧರನ್ನು ಅನಾಥಾಶ್ರಮಕ್ಕೆ ಸೇರಿಸಿ ಎಂದು ಕೇಳಿ ಕೊಂಡಿದ್ದರು ಅದರಂತೆ ಕರ್ನಾಟಕ ರಕ್ಷಣಾ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜರವರು ಹಂಡ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ವೀರೇಂದ್ರ ಕುಮಾರ್ ಅವರನ್ನು ಫೋನ್ ಮುಖಾಂತರ ಸಂಪರ್ಕಿಸಿ ಬಳ್ಳಾರಳ್ಳಿ ಬಸ್ ನಿಲ್ದಾಣದಲ್ಲಿ ವೃದ್ಧರೊಬ್ಬರು ಮಲಗುತ್ತಿದ್ದಾರೆ ಅವರನ್ನು ಅನಾಥಾಶ್ರಮಕ್ಕೆ ಸೇರಿಸಲು ಪಂಚಾಯಿತಿಯಿಂದ ಲೆಟರ್ ಹಾಗೂ ಬೆಂಗಳೂರಿಗೆ ಕರೆದು ಕೊಂಡು ಕಾರಿನ ವ್ಯವಸ್ಥೆ ಮಾಡಿಕೊಡಲು ತಿಳಿಸಿದ ಮೇರೆಗೆ ವೀರೇಂದ್ರ ಕುಮಾರ್ ಅವರು ಹಂಡ್ಲಿ ಪಂಚಾಯತಿ ಅಭಿವೃದ್ಧಿಯ ಅಧಿಕಾರಿಗಳ ಹತ್ತಿರ ಮಾತನಾಡಿ ವೃದ್ಧನನ್ನು ಅನಾಥಾಶ್ರಮಕ್ಕೆ ಸೇರಿಸಲು ಸಹಕರಿಸಿದ್ದಾರೆ ಹಾಗೆಯೇ ಇವತ್ತು ಬೆಳಿಗ್ಗೆ 6:00.ಗೆ ಕರವೇ ತಾಲೂಕಾ ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜರವರು ಹಾಗೂ ವೀರೇಂದ್ರ ಕುಮಾರ್ ಹಾಗೂ ಬಳ್ಳಾರಳ್ಳಿ ಜಗದೀಶ್ ಹಾಗೂ ಬಳ್ಳಾರಳ್ಳಿ ಗ್ರಾಮದ ಗಂಗಾಧರ್ ಇವರೆಲ್ಲರೂ ಸೇರಿಸಿ ಈ ವಯಸ್ಸಾದ ವೃದ್ಧನನ್ನು ಸ್ನಾನ ಮಾಡಿಸಿ ( ಸಂಪೂರ್ಣ ಕೊಳಕು ಸ್ಥಿತಿಯಲ್ಲಿದ್ದ ವೃದ್ಧರು) ಇವರನ್ನು ಸ್ನಾನ ಮಾಡಿಸಿ ಬೇರೆ ಒಳ್ಳೆಯ ಬಟ್ಟೆಯನ್ನು ತೊಡಿಸಿ ನಂತರ ಬೆಂಗಳೂರು ಆಟೋ ರಾಜ ಅನಾಥಾಶ್ರಮ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾ ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜರವರ ಖುದ್ದಾಗಿ ಬೆಂಗಳೂರು ಹೋಗಿ ಈ ವೃದ್ಧರನ್ನು ಅನಾಥಾಶ್ರಮಕ್ಕೆ ಸೇರಿಸಲಾಯಿತು. ಇದೇ ಸಮಯದಲ್ಲಿ ಹಂಡ್ಲಿ ಗ್ರಾಮ ಪಂಚಾಯಿತಿಯ ಸದಸ್ಯರಾದ ವೀರೇಂದ್ರ ಕುಮಾರ್ ರವರು ಸಂಪೂರ್ಣ ಸಹಕಾರ ನೀಡಿರುತ್ತಾರೆ ಅವರಿಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಹಾಗೆಯೇ ಈ ವೃದ್ಧರನ್ನು ಸ್ನಾನ ಮಾಡಿಸಲು ಸಹಕಾರ ನೀಡಿದ ಜಗದೀಶ್ ರವರಿಗೆ ಹಾಗೂ ಸ್ಥಾನ ಮಾಡಿಸಲು ಬಿಸಿ ನೀರಿನ ವ್ಯವಸ್ಥೆ ಹಾಗೂ ಬಟ್ಟೆ ನೀಡಿದ ಗಂಗಾಧರ ರವರಿಗು ಕರವೇಯಿಂದ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಹರೀಶ್ ರವರು ಅನಾಥ ವೃದ್ಧರು ಅಂತ ಅನಾಥಾಶ್ರಮಕ್ಕೆ ಲೆಟರ್ ಕೊಟ್ಟಿರುತ್ತಾರೆ ಹಾಗೂ ಈ ವೃದ್ಧನನ್ನು ಬೆಂಗಳೂರಿಗೆ ಕರೆದು ಕೊಂಡು ಹೋಗಲು ಕಾರಿನ ವ್ಯವಸ್ಥೆ ಸಹ ಮಾಡಿ ಕೊಟ್ಟಿರುತ್ತಾರೆ ಇವರಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಹಾಗೂ ಈ ವೃದ್ಧರನ್ನು ಕರವೇ ಯಿಂದ ಆಟೋ ರಾಜ ಅನಾಥಾಶ್ರಮಕ್ಕೆ ಸೇರಿಸಿ ಕೊಳ್ಳುವುದಕ್ಕೆ ಫೋನ್ ಮುಖಾಂತರ ಸಂಪರ್ಕಿಸಿದಾಗ ಆಟೋ ರಾಜ ಸಂಸ್ಥೆಯವರು ಸಂತೋಷದಿಂದ ಒಪ್ಪಿಕೊಂಡಿರುತ್ತಾರೆ ಆಟೋ ರಾಜ ಅನಾಥಾಶ್ರಮದವರಿಗೆ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಇದೇ ಸಮಯದಲ್ಲಿ ಸೋಮವಾರಪೇಟೆ ತಾಲೂಕಾ ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಹಾಗೂ ಹಂಡ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ವೀರೇಂದ್ರ ಕುಮಾರ್ ಮತ್ತು ಬಾಳ್ಳಾರಳಿ ಜಗದೀಶ್ ಹಾಗೂ ಗಂಗಾಧರ ಹಾಗೂ ಭರತ್ ಹಾಗೂ ಹೂವಯ್ಯ ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

ಜಿಲ್ಲಾ ವರದಿಗಾರರು:ಎಂ.ಎಂ.ಶರ್ಮಾ.ಬೆಳಗಾವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button