ಪ್ರಕಟಣೆ.

ಕರ್ನಾಟಕ ರಾಜ್ಯವನ್ನು ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಬೆಳಗಿಸಿದ ಮಹಾಜ್ಯೋತಿ, ತ್ಯಾಗವೀರ ಲಿಂಗೈಕ್ಯ ಶಿರಸಂಗಿ ಲಿಂಗರಾಜ ದೇಸಾಯಿಯವರ ಜಯಂತಿಯನ್ನು ಮಹಾ ಸಭೆಯ ಅಧ್ಯಕ್ಷರಾದ ಡಾ. ಶಾಮನೂರು ಶಿವಶಂಕರಪ್ಪ, ಶಾಸಕರು ಇವರ ಅಧ್ಯಕ್ಷತೆಯಲ್ಲಿ ದಾವಣಗೆರೆಯಲ್ಲಿ ಇಂದು ಮಹಾ ಸಭೆಯ ಜಿಲ್ಲಾ ಘಟಕದ ವತಿಯಿಂದ ಆಚರಿಸಲಾಯಿತು.ಶಿರಸಂಗಿ ಲಿಂಗರಾಜ ದೇಸಾಯಿಯವರು ಮಹಾ ಸಭೆಯ ಪ್ರಥಮ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ, ನಾಡಿಗೆ ಅವರು ಕೊಟ್ಟಿರುವ ಕೊಡುಗೆಗಳನ್ನು ವಿಶೇಷವಾಗಿ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಡಾ, ಶಾಮನೂರ್ ಶಿವಶಂಕರಪ್ಪನವರು ಪುಷ್ಪ ನಮನ ಸಲ್ಲಿಸಿ ಸ್ಮರಿಸಿದರು ಈ ಜಯಂತಿ ಕಾರ್ಯಕ್ರಮದಲ್ಲಿ ಮಹಾ ಸಭೆಯ ಉಪಾಧ್ಯಕ್ಷರುಗಳಾದ ಶ್ರೀ ಅಥಣಿ ವೀರಣ್ಣ, ಶ್ರೀ ಅಣಬೇರು ರಾಜಣ್ಣ, ಶ್ರೀ ಶಾಮನೂರು ಗಣೇಶ, ಕಾರ್ಯದರ್ಶಿಗಳಾದ ಶ್ರೀ ಹೆಚ್.ಎಂ.ರೇಣುಕಪ್ರಸನ್ನ, ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ದೇವರಮನಿ ಶಿವಕುಮಾರ ಹಾಗೂ ಜಿಲ್ಲಾ ಘಟಕ, ಮಹಿಳಾ ಮತ್ತು ಯುವ ವಿಭಾಗಗಳ ಪದಾಧಿಕಾರಿಗಳು ಹಾಜರಿದ್ದರು.
ಜಿಲ್ಲಾ ವರದಿಗಾರರು:ಎಂ.ಎಂ.ಶರ್ಮಾ.ಬೆಳಗಾವಿ