ಡೆಂಗ್ಯೂ ಜಾಗೃತಿ ರಥಕ್ಕೆ ಚಾಲನೆ ನೀಡಿದ – ಶಾಸಕ ಡಾ. ಎನ್.ಟಿ. ಶ್ರೀ ನಿವಾಸ್.
ಕಾನಾ ಹೊಸಹಳ್ಳಿ ಜನೇವರಿ.14

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನ ಹೊಸಹಳ್ಳಿ ಹೋಬಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಡೆಂಗ್ಯೂ ಜಾಗೃತಿ ರಥಕ್ಕೆ ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಡಾ. ಎನ್.ಟಿ ಶ್ರೀನಿವಾಸ್ ಚಾಲನೆ ನೀಡಿದರು. ನಂತರ ಶಾಸಕರು ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ಸುತ್ತ ಮುತ್ತ ರಸ್ತೆ ಅಕ್ಕ ಪಕ್ಕದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಮಲೀನ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಡೆಂಗ್ಯೂ ಮಲೇರಿಯಾ ಸಾಂಕ್ರಾಮಿಕ ರೋಗಗಳು ನಾನಾ ಕಾಯಿಲೆಗಳು ಹರಡದಂತೆ ಮುಂಜಾಗ್ರತೆ ವಹಿಸಬೇಕು. ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಡಿ.ಎಚ್.ಓ ಶಂಕರ್ ನಾಯ್ಕ್, ಟಿ.ಎಚ್.ಓ .ಎಸ್. ಪಿ ಪ್ರದೀಪ್ ಕುಮಾರ್,. ಗ್ರಾಪಂ ಅಧ್ಯಕ್ಷ ಎ.ಸಿ. ಚೇತನ್. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ವಿಶ್ವನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಮಾರ ಗೌಡ, ಜಮ್ಮೋ ಬನಹಳ್ಳಿಜಿ.ಓಬಣ್ಣ. ಟಿ ಗಂಗಾಧರ, ಫೋಟೋ ಸಿದ್ದಲಿಂಗಪ್ಪ,ಸೂರ್ಯಪ್ರಕಾಶ್, ಪ್ರಸತೀಶ್, ನಾಗೇಶ್, ಮಂಜುನಾಥ, ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಜನ ಪ್ರತಿನಿಧಿಗಳು, ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಆಶಾ ಕಾರ್ಯಕರ್ತರು ಮತ್ತು ಆಸ್ಪತ್ರೆಯ ಸಿಬ್ಬಂದಿ ಸಾರ್ವಜನಿಕರಿದ್ದರು.
ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ