ಕಾಂಗ್ರೇಸ್ ಯೋಜನೆಗಳೆ ಗೆಲುವಿಗೆ ಕಾರಣ, ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ – ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.
ಮಾನ್ವಿ ನ.23

ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿಯಲ್ಲಿ ನಡೆದ ಉಪ ಚುನಟವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾನ್ವಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದ ಯೋಜನೆಗಳೆ ಗೆಲುವಿಗೆ ಕಾರಣ ಎಂದು ಜಯಘೋಷ ಕೂಗಿದರು. ಬಿಜೆಪಿ ಪಕ್ಷ ಎಷ್ಟೆ ಪ್ರಯತ್ನ ಪಟ್ಟರು ಮತದಾರರು ತಕ್ಕ ಪಾಠ ಕಲಿಸಿದ್ದಾರೆಂದು ಸಂಭ್ರಮಿಸಿದರು.
ಬಿಜೆಪಿ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಕರಣದಲ್ಲಿ ಸಿಕ್ಕಿ ಹಾಕಿಸುವ ಕೆಲಸ ಮಾಡಿದರು ಸಹ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದ ಮತದಾರರು ಯಾರಿಗೆ ಮತ ನೀಡಬೇಕು ಎಂದು ಆಲೋಚನೆ ಮಾಡಿದ್ದಾರೆಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ