ವಿದ್ಯಾರ್ಥಿಗಳಲ್ಲಿ ಸೇವಾಮನೋಭಾವ ಅಗತ್ಯ
ಇಂಡಿ ಜೂನ್.18

ಇಂಡಿ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ, ಸಾಮಾಜಿಕ ಪ್ರಜ್ಞೆ ಬೆಳೆಸುವ ನಿಟ್ಟಿನಲ್ಲಿ ಎನ್ನೆಸ್ಸೆಸ್ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ವ್ಯಕ್ತಿತ್ವ ರೂಪಿಸಲು ಸಹಾಯಕಾರಿಯಾಗಿದೆ ಎಂದು ವಿಜಯಪುರ ಜಿಲ್ಲೆಯ ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ. ಪ್ರಕಾಶ ರಾಠೋಡ ಹೇಳಿದರು. ಪಟ್ಟಣದ ಜಿ.ಆರ್. ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಎಮ್.ಎಫ್.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದ ದೇಶಪಾಂಡೆ ತಾಂಡಾ ನಂ.೦೧ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮಾತನಾಡಿದರು. ಪ್ರಾಂಶುಪಾಲ ಎಸ್.ಬಿ.ಜಾಧವ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಬೇರೆ ಬೇರೆ ಮನೋಭಾವದವರನ್ನು ಕಂಡಿರುತ್ತೇವೆ. ಕೆಲವರು ಪಾಠ, ಪರೀಕ್ಷೆ ಅಂಕಗಳನ್ನು ಪಡೆಯುವದರಲ್ಲಿಯೇ ಮಗ್ನರಾಗಿರುತ್ತಾರೆ. ಕೇವಲ ಪಾಠ-ಪ್ರವಚನಗಳಿಂದ ಜೀವನದಲ್ಲಿ ಯಶಸ್ಸು ಪಡೆಯಬಹುದು ಆದರೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಯಾದಲ್ಲಿ ಮಾತ್ರ ಸ್ಟುಡೆಂಟ್ ಲೈಫ್ ಗೋಲ್ಡನ್ ಲೈಫ್ ಆಗಲು ಸಾಧ್ಯ ಎಂದರು. ಕುಮಾರಿ ಸುಧಾರಾಣಿ ಕೂಳಗೇರಿ, ಎನ್ನೆಸ್ಸೆಸ್ ಅಧಿಕಾರಿ ಡಾ.ವಿಶ್ವಾಸ ಕೋರವಾರ, ಕುಮಾರ ಜಾವೇದ ತಾಂಬೋಳಿ ಮಾತನಾಡಿದರು. ವೇದಿಕೆಯಲ್ಲಿ ದೇಶಪಾಂಡೆ ತಾಂಡಾದ ಹಿರಿಯರಾದ ಭೀಮು ವಿಠೋಬಾ ಚವ್ಹಾಣ, ಲಿಂಬುವಾಲು ರಾಠೋಡ, ವಿಜು ರಾಠೋಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವೃಂದ ಮತ್ತಿತರಿದ್ದರು.