ಜ.26 ರಂದು ಸಂವಿಧಾನ ಪೂರ್ವ ಪೀಠಿಕೆ ಓದು ಮತ್ತು ಫೆ.11 ರಿಂದ ಸಂವಿಧಾನ ಜಾಗೃತಿ ಜಾಥಾ.
ಹುನಗುಂದ ಜನೇವರಿ.22

ಹುನಗುಂದ ಮತ್ತು ಇಲಕಲ್ಲ ತಾಲೂಕಿನಲ್ಲಿ ಜ.26 ರಂದು 75.ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಎಲ್ಲ ಶಾಲಾ ಕಾಲೇಜುಗಳಲ್ಲಿ ಓದುವುದು ಮತ್ತು ಫೆಬ್ರುವರಿ 11 ರಿಂದ ಫೆಬ್ರುವರಿ 23.ರ ವರೆಗೆ ಸಂವಿಧಾನ ಜಾಗೃತಿ ಜಾಥಾ ಕಾಯಾಕ್ರಮದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು,ಸ್ವ-ಸಹಾಯ ಸಂಘಗಳ ಸದಸ್ಯರು,ಶಾಲಾ ಕಾಲೇಜುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿಗಳು ಮತ್ತು ದಲಿತ ಸಮಾಜದ ಮುಖಂಡರು ಸ್ವಯಂ ಪ್ರೇರಿತರಾಗಿ ಜಾಥಾ ಕಾರ್ಯಾಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:೦8351-26೦583 ಸಂಪರ್ಕಿಸಿ.
ತಾಲೂಕ ವರದಿಗಾರರು: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ.ಹುನಗುಂದ