ಹಿರೇಮಳಗಾವಿ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ.
ಹಿರೇಮಳಗಾವಿ ಜನೇವರಿ.26

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 75.ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಮುಖ್ಯ ಗುರು ಮಾತೆಯರಾದ ಶ್ರೀಮತಿ ಬಿ.ಬಿ. ದೇವದುರ್ಗ ರವರು ಗಣರಾಜ್ಯೋತ್ಸವದ ಕುರಿತು ಅನಿಸಿಕೆಗಳನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಾಗಿರುವ ಶ್ರೀ ಎಂ.ಹೆಚ್.ಪೂಜಾರಿ ಗುರುಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಗಣರಾಜ್ಯೋತ್ಸವದ ಕುರಿತು ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಹುನಗುಂದ ತಾಲೂಕು ಪ್ರಾಥಮಿಕ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿರುವ ಶ್ರೀ ಎಂ. ಹೆಚ್. ಪೂಜಾರಿ ಗುರುಗಳಿಗೆ ಹಾಗೂ ಹುನಗುಂದ ತಾಲೂಕಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವ ಶ್ರೀ ಬಿ. ಎಂ. ಅಂಗಡಿ ಗುರುಗಳಿಗೆ ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಹಲವಾರು ವಿದ್ಯಾರ್ಥಿಗಳು ಗಣರಾಜ್ಯೋತ್ಸವದ ಕುರಿತು ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಹಾಗೂ ದೇಶಭಕ್ತಿಯ ಗೀತೆಗಳಿಗೆ ನೃತ್ಯಗಳನ್ನು ಮಾಡುವುದರ ಮೂಲಕ ಅತಿ ವಿಜ್ರಂಭಣೆಯಿಂದ ರಾಷ್ಟ್ರೀಯ ಹಬ್ಬವನ್ನು ಆಚರಣೆ ಮಾಡಿದರು. ಊರಿನ ಗಣ್ಯ ಮಾನ್ಯರು, ಮಾಜಿ ಯೋಧರು ಯುವಕ ಯುವತಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ಶ್ರೀ ಮುತ್ತು ವಡ್ಡರ ನೆರವೇರಿಸಿದರು. ಶ್ರೀ ಹನುಮಂತ ಮಾದರ ಗುರುಗಳು ವಂದಿಸಿದರು.