ಬೆಂಗಳೂರಿನಲ್ಲಿ ಅಮ್ಮಾಜೇಶ್ವರಿ ಏತ ನೀರಾವರಿ 2.ನೇ ಹಂತದ ಯೋಜನೆ ಕೈಗೊಳ್ಳುವ ಕುರಿತು ಮಾಜಿ ಡಿಸಿಎಂ, ಶಾಸಕರಾದ ಲಕ್ಷಣ.ಸಂ.ಸವದಿ. ನೇತೃತ್ವದಲ್ಲಿ ಅಧಿಕಾರಿಗಳ ಸಭೆ.
ಅಥಣಿ ಫೆಬ್ರುವರಿ.1

ತಾಲೂಕಿನ ಪೂರ್ವ ಭಾಗದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಅಮ್ಮಾಜೇಶ್ವರಿ (ಕೊಟ್ಟಲಗಿ) ಏತ ನೀರಾವರಿಯ 2.ನೇ ಹಂತದ ಕಾಮಗಾರಿ ಕೈಗೊಳ್ಳುವ ಕುರಿತು ಬೆಂಗಳೂರಿನ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಹಸಿರುಕ್ರಾಂತಿ ಹರಿಕಾರರು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ನೇತೃತ್ವದಲ್ಲಿ ಇಂದು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಜರುಗಿತು.ಅಮ್ಮಾಜೇಶ್ವರಿ (ಕೊಟ್ಟಲಗಿ) ಏತ ನೀರಾವರಿ ಯೋಜನೆಗೆ ಮೊದಲನೇ ಹಂತದಲ್ಲಿ 900 ಕೋಟಿ ರೂ. ಮಂಜೂರಾಗಿದ್ದು, ಒಟ್ಟು 1487 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ಕೈಗೆತ್ತಿ ಕೊಳ್ಳಲಾಗುತ್ತಿದೆ. 2.ನೇ ಹಂತದಲ್ಲಿ 587 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳುವ ಕುರಿತು ಹಾಗೂ ಕಾಮಗಾರಿಯ ರೂಪು ರೇಷೆಯ ಬಗ್ಗೆ ವಿಸ್ತೃತವಾಗಿ ಸಭೆಯಲ್ಲಿ ಚರ್ಚಿಸಲಾಯಿತು.

ಈ ಯೋಜನೆಯಿಂದ ಅಥಣಿ ಪೂರ್ವ ಭಾಗದಲ್ಲಿನ ಹಳ್ಳಿಗಳಾದ ಕೊಟ್ಟಲಗಿ, ಕಕಮರಿ, ಐಗಳಿ, ಅಡಹಳ್ಳಿ, ಅಡಹಳಟ್ಟಿ, ಕೋಹಳ್ಳಿ, ಕನ್ನಾಳ, ತೆಲಸಂಗ, ಫಡತರವಾಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಸುಮಾರು 72 ಸಾವಿರ ಎಕರೆಗೂ ಹೆಚ್ಚು ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರಕಲಿದೆ. ಶೀಘ್ರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಿ, 2 ವರ್ಷದೊಳಗಾಗಿ ಪೂರ್ಣ ಗೊಳಿಸಲು ನಿರ್ಧರಿಸಲಾಗಿದ್ದು, ಈ ಭಾಗದ ರೈತರ ಬಹು ದಿನಗಳ ನೀರಾವರಿ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.ಸಭೆಯಲ್ಲಿ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ ಅಮ್ಮಿನಬಾವಿ, ಮುಖ್ಯ ಇಂಜಿನಿಯರ್ರಾದ ಬಿ. ಆರ್. ರಾಠೋಡ, ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಜಿ. ಶ್ರೀನಾಥ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರವೀಣ ಹುಣಸೀಕಟ್ಟಿ, ಸಹಾಯಕ ಇಂಜಿನಿಯರ್ ಭರತೇಶ ಮಹಿಷವಾಡಗಿ, ಇ.ಐ. ಟೆಕ್ನಾಲಜಿ ವಿಭಾಗದ ಸಂದೀಪ ನಾಡಿಗೇರ* ಸೇರಿದಂತೆ ನೀರಾವರಿ ಇಲಾಖೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು:ಎಂ.ಎಂ.ಶರ್ಮಾ.ಬೆಳಗಾವಿ