ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ – ಸಂಯುಕ್ತ ಕರ್ನಾಟಕ ಹಾಗೂ ಕಾರ್ಮಿಕರ ಪ್ರತಿಭಟನೆ.
ಕಾನಾ ಹೊಸಹಳ್ಳಿ ಫೆಬ್ರುವರಿ.17
![](https://i0.wp.com/sknewskannada.in/wp-content/uploads/2024/02/IMG-20240217-WA0071-1024x461.jpg?resize=708%2C319&ssl=1)
ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸಹಯೋಗದಲ್ಲಿ ಮನವಿ ಸಲ್ಲಿಸಲಾಯಿತು. ಕಾನ ಹೊಸಹಳ್ಳಿ ಪಟ್ಟಣದ ನಾಡ ಕಛೇರಿಯಲ್ಲಿ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನಾಡ ಕಚೇರಿಯ ಉಪ ತಹಶೀಲ್ದಾರ್, ಜಿಲ್ಲಾ ಅಧಿಕಾರಿಗಳ ಮುಖಾಂತರ ಭಾರತ ಸರ್ಕಾರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಆರ್ ಐ ಮುರಳಿ ಕೃಷ್ಣ ಮನವಿ ಸ್ವೀಕರಿಸಿದರು. ಎನ್ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷ ಸಮೀಪಿಸುತ್ತಿದೆ. 2 ಕೋಟಿ ಉದ್ಯೋಗದ ಸೃಷ್ಟಿ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಜಮಾವಣೆ, ಡಾ.ಸ್ವಾಮಿನಾಥನ್ ವರದಿ ಶಿಫಾರಸಿನಂತೆ ಬೆಂಬಲ ಬೆಲೆಯ ಕಾನೂನು ಜಾರಿಯ ಕುರಿತ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಿ ಇದೀಗ ಜನರನ್ನು ಸುಲಿಗೆ ಮಾಡಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬೇಡಿಕೆಗಳು:ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ,ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರಿಗೆ ಬದುಕಲು ಅವಕಾಶ ನೀಡುವ ನೀತಿ ಜಾರಿಗೆ ತರಬೇಕು, ಎಲ್ಲಾ ಸ್ವರೂಪದ ಖಾಸಗೀಕರಣ ಕೈಬಿಡಬೇಕು, ಕೃಷಿ ಕಾರ್ಮಿಕರಿಗೆ ಸಮಗ್ರವಾದ ಕಲ್ಯಾಣ ಯೋಜನೆಗಳು, ಕಾರ್ಮಿಕ ವಿರೋಧಿ ನೀತಿಗಳನ್ನು ಕೈ ಬಿಟ್ಟು ಕಾರ್ಮಿಕರ ಪರವಾದ ನೀತಿಗಳನ್ನು ಅನುಷ್ಠಾನಕ್ಕೆ ತರುವುದು ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಬಯಲು ತುಂಬರಗುದ್ದಿ ಚಂದ್ರು, ಯುವ ಮುಖಂಡ ಸೂರ್ಯ ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯ ಹೊನ್ನೂರ ಸ್ವಾಮಿ, ಯುವ ಮುಖಂಡ ಬಸವರಾಜ, ಮಹಾಂತೇಶ್, ಮಲ್ಲೇಶ್ ಸೇರಿ ಇತರ ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ