ಬಿಜೆಪಿ ಕೂಡ್ಲಿಗಿ ತಾಲೂಕಾ ರೈತ ಮೋರ್ಚಾ ಅಧ್ಯಕ್ಷರಾಗಿ ಯಜಮಾನಪ್ಪ ನೇಮಕ.
ಎಂ.ಬಿ.ಅಯ್ಯನಹಳ್ಳಿ ಫೆಬ್ರುವರಿ.19

ಕಾನ ಹೊಸಹಳ್ಳಿ ಹೋಬಳಿಯ ಸಮೀಪದ ಎಂ.ಬಿ. ಅಯ್ಯನಹಳ್ಳಿ ಗ್ರಾಮದ ಯಜಮಾನಪ್ಪ ಅವರನ್ನು ವಿಜಯನಗರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಕೂಡ್ಲಿಗಿ ತಾಲೂಕಾ ರೈತ ಮೋರ್ಚ ಅಧ್ಯಕ್ಷರನ್ನಾಗಿ ಬಿಜೆಪಿ ಕೂಡ್ಲಿಗಿ ತಾಲೂಕಾ ಮಂಡಲ ಅಧ್ಯಕ್ಷ ಕೆ. ನಾಗರಾಜ್ ಬಣವಿಕಲ್ಲು ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ವೇಳೆ ನೂತನ ವಿಜಯನಗರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಕೂಡ್ಲಿಗಿ ತಾಲೂಕಾ ರೈತ ಮೋರ್ಚ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿ ಬಿಜೆಪಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ವಹಿಸಿಕೊಂಡು ಜಿಲ್ಲೆಯ ಹಳ್ಳಿ ಹಳ್ಳಿಗಳಿಗೆ ಹೋಗಿ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಸಂಘಟಿಸುತ್ತೇನೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಕ್ಷೇತ್ರಗಳಲ್ಲಿಯೂ ಬಿಜೆಪಿ ಹೆಚ್ಚಿನ ಮತ ಗಳಿಸಲು ಶ್ರಮಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸನ್ಮಾನಿಸಿ ಅಭಿನಂದಿಸಿದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ