ಕೂಡ್ಲಿಗಿ:ಸಾಮಾಜಿಕ ನ್ಯಾಯ ದಿನಾಚರಣೆ.

ಕೂಡ್ಲಿಗಿ ಫೆಬ್ರುವರಿ.20 :

ವಿಜಯನಗರ ಜಿಲ್ಲೆಯ ಕೂಡ್ಲಿಗ ತಾಲೂಕಿನ ಕೂಡ್ಲಿಗಿ ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ, ನ್ಯಾಯಾಂಗ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾನೂನು ಸೇವಾ ಸಮಿತಿ, ಮಾಜಿ ದೇವದಾಸಿಯರ ಸಂಘ, ವಿವಿಧ ಇಲಾಖೆಗಳ ಸಹಯೋಗದೊಂದಿಗೆ , ಸಾಮಾಜಿಕ ನ್ಯಾಯ ದಿನಾಚರಣೆ ಆಚರಿಸಲಾಯಿತು.

ಹಿರಿಯ ಶ್ರೇಣಿ ನ್ಯಾಯಾಧೀಶರಾದ ಯೋಗೇಶವರು, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ಯಾನಲ್ ವಕೀಲರಾದ ಸಿ.ವಿರುಪಾಕ್ಷಪ್ಪ , ಹಾಗೂ ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಗುನ್ನಳ್ಳಿ ನಾರಾಯಣಪ್ಪ ಅವರು ದಿನಾಚರಣೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವ ಉಪನ್ಯಾಸ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಜಿ.ಎಮ್.ಮಲ್ಲಿಕಾರ್ಜುನಯ್ಯ, ಸಹಾಯಕ ಸರ್ಕಾರಿ ಅಭಿಯೋಜಕರಾದ ಶಿಲ್ಪ, ಮಾತನಾಡಿದರು. ವಕೀಲರಾದ ಡಿಕೆಬಿ ರಾಜು, ಹೆಚ್.ವೆಂಕಟೇಶ, ರಮೇಶ ವೇದಿಕೆಯಲ್ಲಿದ್ದರು. ಮಾಜಿ ದೇವದಾಸಿಯರು ಉಪಸ್ಥಿತರಿದ್ದರು.

DOWNLOAD OUR APP: https://play.google.com/store/apps/details?id=com.bluechip.sknews

ಸ್ನೇಹ ಸಂಸ್ಥೆ ಹಾಗೂ ವಿಮುಕ್ತಿ ಸಂಘದ ಪಾದಾಧಿಕಾರಿಗಳು, ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆಯ ಮಾಜಿ ದೇವದಾಸಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಜಿಲ್ಲಾ ವರದಿಗಾರರು (ಎಸ್.ಕೆ ನ್ಯೂಸ್ ಕನ್ನಡ ಚಾನಲ್): ರಾಘವೇಂದ್ರ.ಬಿ.ಸಾಲುಮನೆ.ಕೂಡ್ಲಿಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button