ಮಂಡಲ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ.
ಹೊಸಪೇಟೆ ಫೆಬ್ರುವರಿ.23

ಲೋಕಸಭೆ ಚುನಾವಣೆಗೆ ಯಾರೇ ಪಕ್ಷದ ಅಭ್ಯರ್ಥಿಯಾದರೂ ಅವರನ್ನು ಗೆಲ್ಲಿಸುವ ಹೊಣೆ ನಮ್ಮದಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಹೇಳಿದರು.ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಮಂಡಲ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾನ್ಯ ಕಾರ್ಯಕರ್ತರೂ ಉನ್ನತ ಹುದ್ದೆ ಅಲಂಕರಿಸುವ ಏಕೈಕ ಪಕ್ಷ ಬಿಜೆಪಿಯಾಗಿದೆ. ಆದರೆ ಕಾಂಗ್ರೆಸ್ನಲ್ಲಿ ಈ ಸಂಸ್ಕೃತಿ ಇಲ್ಲ. ನೆಹರು ಅವರ ಕುಟುಂಬ ಅಲ್ಲಿ ಅಂತಿಮ ನಿರ್ಣಾಯಕರು, ಗ್ಯಾರಂಟಿ ಯೋಜನೆಯಲ್ಲಿ ಮುಳುಗಿರುವ ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ನೀಡಿಲ್ಲ.

ಕೇಂದ್ರ ಸರ್ಕಾರದ ಸಾಧನೆ ಹಾಗೂ ಕಾಂಗ್ರೆಸ್ ದುರಾಡಳಿತದ ಬಗ್ಗೆ ಜನರಿಗೆ ಮನವರಿಕೆ ಮಾಡಿಸಬೇಕು. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕಾಗಿದ್ದು ಮನೆ ಮನೆಗಳಲ್ಲಿ ಬಿಜೆಪಿ ಬೇರೂರಬೇಕಿದೆ. ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿಯಶಸ್ವಿಯಾಗಬೇಕು ಎಂದರು. ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಜಿಲ್ಲಾ ಉಪಾಧ್ಯಕ್ಷ ಸಿದ್ದಾರ್ಥ ಸಿಂಗ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ನಗರಸಭೆ ಅಧ್ಯಕ್ಷೆ ಲತಾ, ಪ್ರಮುಖರಾದ ಅಶೋಕ್ ಬೇರೆ, ಜಂಬಯ್ಯನಾಯಕ, ಸಾಲಿಸಿದ್ದಯ್ಯಸ್ವಾಮಿ, ಶ್ರೀನಿವಾಸ್, ರೇವಣ್ಣಸಿದ್ದಪ್ಪ, ಅರುಂಡಿ ಸುವರ್ಣಮ್ಮ, ಬಸವರಾಜ್ ನಾಲತ್ವಾಡ ಪಕ್ಷದ ಒಗ್ಗಟ್ಟಿಗೆ ಸಾಕ್ಷಿ ಎಂಬಂತೆ ಎಲ್ಲಾ ಮೋರ್ಚಾ ಕಾರ್ಯಕರ್ತರು ಇತರರಿದ್ದರು ಪಾಲ್ಗೊಂಡಿದ್ದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ. ನ್ಯೂಸ್ ಕನ್ನಡ ಚಾನಲ್:ಮಾಲತೇಶ್.ಶೆಟ್ಟರ್.ಹೊಸಪೇಟೆ