ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ನೂತನ ಕಟ್ಟಡ ಭೂಮಿ ಪೂಜೆ ನೆರವೇರಿಸಿದ – ಶಾಸಕ ವಿಜಯಾನಂದ ಕಾಶಪ್ಪನವರ.
ಇಲಕಲ್ಲ ಮಾರ್ಚ್.4

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಬಾಗಲಕೋಟ 2022-23 ನೇ. ಸಾಲಿನ ವಿವೇಕ ಶಾಲಾ ಯೋಜನೆಯಡಿಯಲ್ಲಿ ಅಂದಾಜು ಮೊತ್ತ 41.89ಲಕ್ಷಗಳು ವೆಚ್ಚದಲ್ಲಿ 02 ಕೊಠಡಿ ನಿರ್ಮಾಣ ಇಳಕಲ್ ತಾಲೂಕಿನ ಇಳಕಲ್ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ನೂತನ ಕಟ್ಟಡ ಭೂಮಿ ಪೂಜೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ನೇವರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು,ಸದಸ್ಯರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ