ಬಿಜೆಪಿ ತಾಲೂಕಾ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿಯಾಗಿ ನಿರಂಜನ್ ಕುಮಾರ್ ಎ. ಹೊಸಹಳ್ಳಿ ನೇಮಕ.
ಕಾನಾ ಹೊಸಹಳ್ಳಿ ಮಾರ್ಚ್.5

ಹೊಸಹಳ್ಳಿ ಗ್ರಾಮದ ನಿರಂಜನ್ ಕುಮಾರ್ ಎ. ಅವರನ್ನು ಕೂಡ್ಲಿಗಿ ತಾಲೂಕು ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿಯಾಗಿ ಬಿಜೆಪಿ ತಾಲೂಕಾ ಅಧ್ಯಕ್ಷ ಜಿ.ಎಸ್ ವಸಂತ್ ಕುಮಾರ್ ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ವೇಳೆ ಕೂಡ್ಲಿಗಿ ತಾಲೂಕು ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿಯಾಗಿ ನಿರಂಜನ್ ಕುಮಾರ್ ಎ. ಅಧಿಕಾರ ಸ್ವೀಕರಿಸಿ ಮಾತನಾಡಿ ಬಿಜೆಪಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ವಹಿಸಿಕೊಂಡು ತಾಲೂಕಿನ ಹಳ್ಳಿ ಹಳ್ಳಿಗಳಿಗೆ ಹೋಗಿ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಸಂಘಟಿಸುತ್ತೇನೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೂಡ್ಲಿಗಿ ಕ್ಷೇತ್ರಗಳಲ್ಲಿಯೂ ಬಿಜೆಪಿ ಹೆಚ್ಚಿನ ಮತ ಗಳಿಸಲು ಶ್ರಮಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸನ್ಮಾನಿಸಿ ಅಭಿನಂದಿಸಿದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ