ಹೆಣ್ಣು ಹಬಲೆಯಲ್ಲ ಅವಳು ಸಬಲೆ ಸ್ವಸಹಾಯ ಸಂಘಗಳ ಮೂಲಕ ಹೆಣ್ಣು ಮಕ್ಕಳಿಗೆ ಆತ್ಮ ವಿಶ್ವಾಸ ಬೆಳೆಸಿದ್ದಾರೆ.
ಹೊಸಪೇಟೆ ಮಾರ್ಚ್.6

ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪಟೇಲ್ ನಗರ ವಲಯದ ಸಾಧನ ಸಮಾವೇಶ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ವಲಯ ಮಟ್ಟದಲ್ಲಿ ಸಾಧನೆಗೈದ ಸಂಘಗಳ ಸದಸ್ಯರನ್ನು ಸನ್ಮಾನಿಸಲಾಯಿತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.ಈ ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಗಣೇಶ್ ಬಿ ಅವರು ಉದ್ಘಾಟಿಸಿ ಮಾತನಾಡಿದ ಅವರು ಹೆಣ್ಣು ಹಬಲೆಯಲ್ಲ ಅವಳು ಸಬಲೆ ಸ್ವಸಹಾಯ ಸಂಘಗಳ ಮೂಲಕ ಹೆಣ್ಣು ಮಕ್ಕಳಿಗೆ ಆತ್ಮವಿಶ್ವಾಸ ಬೆಳೆಸಿದ್ದಾರೆ ಎಂದರು. ಹಾಗೂ ಬದುಕುವ ಕಲೆ ಮಕ್ಕಳಿಗೆ ಸಂಸ್ಕಾರ ಆರ್ಥಿಕ ಶಿಸ್ತು ಜೀವನದ ಶಿಸ್ತು ಒಟ್ಟಿನಲ್ಲಿ ಸುಖೀ ಸಂಸಾರ ನಡೆಸುವಂತಾಗಿದೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಗರ ಸಭೆಯ ಉಪಾಧ್ಯಕ್ಷರಾದ ಶ್ರೀ ಎನ್ ರೂಪೇಶ್ ಕುಮಾರ್ ಅವರು ಮಾತನಾಡಿ ನಾನು ಮೊದಲಿನಿಂದಲೂ ಶ್ರೀ ಧರ್ಮಸ್ಥಳ ಸಂಸ್ಥೆಯ ಅಭಿಮಾನಿಯಾಗಿದ್ದು. ಪರಮ ಪೂಜ್ಯರ ಅಧ್ಯಕ್ಷತೆಯಲ್ಲಿ ಸಂಸ್ಥೆಯು ಯಾವುದೇ ಸರಕಾರವು ಮಾಡದಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಸಮಾಜಕ್ಕೆ ಕೊಡುತ್ತಿದೆ ಎಂದು ಶ್ಲಾಘಿಸಿದರು. ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಸಮಾಜ ಸೇವಕರಾದ ಶ್ರೀ ಕಾಸಟ್ಟಿ ಉಮಾಪತಿ ಅವರು ಮಾತನಾಡಿ ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳನ್ನು ಜನರ ಮನ ಪೂರ್ವಕವಾಗಿ ಒಪ್ಪಿದ್ದಾರೆ ಸಂಸ್ಥೆಯ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ನಾವು ಪುಣ್ಯ ಮಾಡಿರಬೇಕು ಎಂದರು ಕಾರ್ಯಕ್ರಮದಲ್ಲಿ ನಗರ ಸಭೆಯ ಅಧ್ಯಕ್ಷರಾದ ಕು. ಲತಾ ಅರುಣಾಚಲಂ, ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ್ ಶೆಟ್ಟಿ ಸರ್, ತಾಲೂಕಿನ ಕೃಷಿ ಅಧಿಕಾರಿ ಚನ್ನಪ್ಪ ನಿರೂಪಣೆ ಮಾಡಿದರು ವಲಯದ ಮೇಲ್ವಿಚಾರಕಿ ಶ್ರೀಮತಿ ವಿನುತಾ ವರದಿ ಮಂಡಿಸಿದರು. ಮೇಲ್ವಿಚಾರಕ ವೆಂಕಟೇಶ್ ವಂದಿಸಿದರು ಮೇಲ್ವಿಚಾರಕರಾದ ಶರಣಬಸವ ಹಾಗೂ ಮಂಜುನಾಥ್ ಸಹಕರಿಸಿದರು.ಜಿಲ್ಲಾ ಜನಜಾಗೃತಿ ವೇದಿಕೆಯ ಕೋಶಾಧಿಕಾರಿಗಳಾದ ಶ್ರೀ ಪ್ರಕಾಶ್. ತಾಲೂಕಿನ ಯೋಜನಾಧಿಕಾರಿ ಮಾರುತಿ ಎಸ್. ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಮಾಲತೇಶ್.ಶೆಟ್ಟರ್.ಹೊಸಪೇಟೆ