ಹೊಸಹಳ್ಳಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ಶಾರದ ಪೂಜೆ.
ಹೊಸಹಳ್ಳಿ ಮಾರ್ಚ್.6

ಹೊಸಹಳ್ಳಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ಶಾರದಾ ಪೂಜೆ ನೆರವೇರಿಸಿದರು. ಈ ವೇಳೆ ತಾಲೂಕು ಕಲ್ಯಾಣಾಧಿಕಾರಿ ಪ್ರಸಾದಿ ಮಠ ಮಾತನಾಡಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರಾರ್ಥಮಿಕವಾಗಿ ಮತ್ತು ಪ್ರೌಢ ಶಿಕ್ಷಣ ಪಡೆಯುವ ಕಾಲದಲ್ಲಿಯೇ ವಿದ್ಯಾರ್ಥಿಗಳು ಉನ್ನತ ಗುರಿಯನ್ನು ಹೊಂದಿರಬೇಕು. ನಿರಂತರವಾದ ಪರಿಶ್ರಮ ಆಸಕ್ತಿಯ ಮೂಲಕ ಕಲಿಯುದರೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ಪಾಲ್ಗೊಳ್ಳಬೇಕು. ಸ್ವಯಂ ಶಿಸ್ತು. ಸಂಯಮ. ಆತ್ಮವಿಶ್ವಾಸ. ಸಾಧಿಸಲೇ ಬೇಕೆಂಬ ಛಲ. ಸಮಯ ಪ್ರಜ್ಞೆಂತಹ ಮೂಲ ಗುಣಗಳನ್ನು ವಿದ್ಯಾರ್ಥಿಗಳು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಂತದಲ್ಲೇ ಬೆಳೆಸಿ ಕೊಳ್ಳಬೇಕು. ಜೊತೆಗೆ ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಅನೇಕ ಉನ್ನತ ಹುದ್ದೆಗಳ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವುದು ಹೆಮ್ಮೆ ಇದೆ ಎಂದರು.

ಮತ್ತು ಎಸೆಸೆಲ್ಸಿ. ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿ ಉನ್ನತ ಹುದ್ದೆಗಳನ್ನು ಪಡೆಯಲು ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಹೆಚ್ಚು ಅಂಕಗಳು ಪಡೆಯುವುದರಿಂದ ಊರಿಗೆ. ಶಾಲೆಗೆ. ವಸತಿ ನಿಲಯಕ್ಕೆ ಕೀರ್ತಿ ಬರುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು . ಇದೇ ಸಂದರ್ಭದಲ್ಲಿ ತಾಲೂಕು ವಿಸ್ತರಣಾಧಿಕಾರಿ ಅಹಮದ್. ಮೇಲ್ವಿಚಾರಕರಾದ ಮಲ್ಲಪ್ಪ . ಗ್ರಾಮ ಪಂಚಾಯಿತಿ ಸದಸ್ಯ ಪಿತಾಂಬರ. ಮೇಲ್ವಿಚಾರಕಿಯರಾದ ಸಹನಾ. ಸುಮಾ. ನಿಲಯದ ಮೇಲ್ವಿಚಾರಕ ರಾಚಪ್ಪ .ನಿಲಯದ ಮೇಲ್ವಿಚಾರಕರಾದ ಪ್ರಕಾಶ್. ರೇವಣ್ಣ. ಗ್ರಾಮ ಪಂಚಾಯತಿ ಸಿಬ್ಬಂದಿ ನೀರಗಂಟಿ ತಿಪ್ಪೇಶ್. ನಾಗೇಶ್. ರಾಧಮ್ಮ. ಕಿರಣ್ ಕುಮಾರ್ . ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ವಸತಿ ನಿಲಯದ ಸಿಬ್ಬಂದಿ ವರ್ಗದವರು ಸೇರಿದಂತೆ ಇತರ ಉಪಸಿತರಿದ್ದರು.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ