ಎಂ.ಬಿ. ಅಯ್ಯನಹಳ್ಳಿ ಗ್ರಾಮದಲ್ಲಿ ಬಿಜೆಪಿ ಗ್ರಾಮ ಚಲೋ ಪರಿಕ್ರಮ ಯಾತ್ರೆಗೆ ಚಾಲನೆ.

ಕಾನಾ ಹೊಸಹಳ್ಳಿ ಮಾರ್ಚ್.8

ಕೇಂದ್ರ ಸರಕಾರ ಮಾಡಿರುವ ವಿವಿಧ ಸಾಧನೆಗಳ ಬಗ್ಗೆ ಹಾಗೂ ಗ್ರಾಮ ಚಲೋ ಪರಿಕ್ರಮ ಯಾತ್ರೆ ಕಾರ್ಯಕ್ರಮ ನೆರವೇರಿತು. ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿ.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ ಅವರ ಸೂಚನೆಯಂತೆ ಗ್ರಾಮ ಪರಿಕ್ರಮ ಯಾತ್ರೆ ಹಮ್ಮಿಕೊಂಡಿದ್ದು. ಕೂಡ್ಲಿಗಿ ವಿಧಾನಸಭೆ ಕ್ಷೇತ್ರದ ಎಂ ಬಿ ಅಯ್ಯನಹಳ್ಳಿ ಗ್ರಾಮದಲ್ಲಿ ದೀಪ ಬೆಳಗುವುದರ ಮೂಲಕ ಚಾಲನೆ ನೀಡಲಾಯಿತು.ಈ ವೇಳೆ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಎಚ್ ರೇವಣ್ಣ ಮಾತನಾಡಿ ಕೇಂದ್ರದಿಂದ ನೈಸರ್ಗಿಕ ಕೃಷಿಗೆ ನೀಡಲಾಗಿರುವ ಒತ್ತು, 23 ಬೆಳೆಗಳಿಗೆ ಬೆಂಬಲ ಘೋಷಣೆ ಮಾಡಿರುವುದು, ಫಸಲ್ ಬಿಮಾ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ, ಸಿಂಚಾಯಿ ಯೋಜನೆ, ಕೃಷಿ ರಫ್ತು, ಕೃಷಿ ಬಜೆಟ್‌ಗೆ ನೀಡುವ ಹಣ ಹೆಚ್ಚಳ, ರೈತರಿಗೆ ಮಣ್ಣಿನ ಕಾರ್ಡ್ ವಿತರಣೆ, ರಸಗೊಬ್ಬರಗಳ ಸಬ್ಸಿಡಿ 500 ರಷ್ಟು ಏರಿಕೆ ಸೇರಿದಂತೆ ಕೇಂದ್ರದ ಅನೇಕ ಯೋಜನೆಗಳನ್ನು ರೈತ ಕುಟುಂಬಗಳಿಗೆ ವಿತರಿಸಲಾಗುವುದು ಎಂದು ಹೇಳಿದರು.ಈ ವೇಳೆ ಲೋಕಸಭಾ ಚುನಾವಣೆಯ ಉಸ್ತುವಾರಿಗಳು ಸೂರ್ಯ ಪಾಪಣ್ಣ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 28 ಕ್ಷೇತ್ರಗಳನ್ನು ಗೆಲ್ಲಿಸುವುದಾಗಿ ಹೇಳಿದ್ದಾರೆ. ಅವರೊಂದಿಗೆ ನಾವು ನಿಲ್ಲಬೇಕು. ರೈತರ ಕಲ್ಯಾಣಕ್ಕಾಗಿ ಮತ್ತೆ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸ ಬೇಕು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ತೆಗೆದು ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಂಕರ ನವಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಮಂಡಲ ರೈತ ಮೋರ್ಚಾ ಅಧ್ಯಕ್ಷ ಯಜಮಾನಪ್ಪ ಜಿ, ಕೂಡ್ಲಿಗಿ ಮಂಡಲ ಅಧ್ಯಕ್ಷ ಕಾಮಶೆಟ್ಟಿ ನಾಗರಾಜ್, ಸಹ ಉಸ್ತುವಾರಿಗಳು ಕೆ ಚೆನ್ನಪ್ಪ, ರೈತ ಮೋರ್ಚಾ ಜಿಲ್ಲಾ ಖಜಾಂಚಿ ಚಂದ್ರಮೌಳಿ, ಜಿಲ್ಲಾ ರೈತ ಮೋರ್ಚ ಉಪಾಧ್ಯಕ್ಷ ಕಲ್ಲೇಶ ಗೌಡ್ರು, ಜಿಲ್ಲಾ ಕಾರ್ಯದರ್ಶಿ ರೇಖಾ ಮಲ್ಲಿಕಾರ್ಜುನ್, ಬಿಜೆಪಿ ಮುಖಂಡರಾದ ನಾಗಭೂಷಣ್, ಸಣ್ಣ ಬಾಲಪ್ಪ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀರಭದ್ರಪ್ಪ ಎಚ್ ಕೆ ಶಾಂತನಹಳ್ಳಿ, ಪಿ ನಾಗರಾಜ್, ರೈತ ಮೋರ್ಚಾ ಉಪಾಧ್ಯಕ್ಷ ಯರಮ್ಮನಹಳ್ಳಿ ಬಿ ಉಮೇಶ್, ಶ್ರೀಧರ ಮೂರ್ತಿ, ಓಬಿಸಿ ಮೋರ್ಚಾ ಅಧ್ಯಕ್ಷ ವಸಂತಗೌಡ್ರು, ಎಸ್ಸಿ ಮೋರ್ಚಾ ಅಧ್ಯಕ್ಷ ರಾಮಸ್ವಾಮಿ, ಪಾಪ ನಾಯಕ, ಮಂಡಲ ಪ್ರಧಾನ ಕಾರ್ಯದರ್ಶಿ ಸಿದ್ದೇಶ್, ಜಿಲ್ಲಾ ಎಸ್ ಟಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಮಾರೇಶ್, ಆಲೂರು ಶ್ರೀಧರ ಮೂರ್ತಿ ಎಸ್.ಟಿ ಮೋರ್ಚಾ ಉಪಾಧ್ಯಕ್ಷ ಆಂಜಿನಪ್ಪ ಅಮಲಾಪುರ, ಮಂಜುನಾಥ ಕೆ.ಬಿ ಹಟ್ಟಿ ಹಾಗೂ ರೈತ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ರೈತರು ಉಪಸ್ಥಿತರಿದ್ದರು.

ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button