ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಸಿರಿ ಪೌಂಡೇಷನ್ ವತಿಯಿಂದ – ಉಚಿತವಾಗಿ 5 ಸಾವಿರ ಸಸಿಗಳ ವಿತರಣೆ.

ಸಿಂಧನೂರು ಜೂ.03

ನಗರದ PWD ಕ್ಯಾಂಪ್ ನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಾಲಯ ಹತ್ತಿರ ಸರಕಾರಿ ಶಾಲೆಗಳನ್ನು ಹಸಿರುಕರಣ ಗೊಳಿಸಲು ವನಸಿರಿ ಫೌಂಡೇಶನ್ ನಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 5 ಸಾವಿರ ಸಸಿಗಳ ವಿತರಣೆ ಕಾರ್ಯಕ್ರಮವನ್ನು ಇದೇ ಜೂನ್ 4 ರಂದು ಹಮ್ಮಿಕೊಳ್ಳಲಾಗಿದೆ. ಎಂದು ವನಸಿರಿ ಫೌಂಡೇಶನ್ ಸದಸ್ಯ ಚನ್ನಪ್ಪ.ಕೆ ಹೊಸಹಳ್ಳಿ ಅವರು ತಿಳಿಸಿದರು. ಸಿಂಧನೂರು ನಗರದ ವನಸಿರಿ ಫೌಂಡೇಶನ್ ಕಾರ್ಯಾಲಯದಲ್ಲಿ ಮಾತನಾಡಿದ ಪರಿಸರ ಪ್ರೇಮಿ, ವನಸಿರಿ ಫೌಂಡೇಶನ್ ಸದಸ್ಯ ಚನ್ನಪ್ಪ.ಕೆ ಹೊಸಹಳ್ಳಿ ಅವರು ಹಲವಾರು ವರ್ಷಗಳಿಂದ ಸರಕಾರಿ ಶಾಲೆಗಳ ಹಸಿರುಕರಣ ಮಾಡಲು ವನಸಿರಿ ಪೌಂಡೇಷನ್ ತಂಡ ಶ್ರಮಿಸುತ್ತಿದೆ.

ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಬಿಸಿಲಿನ ತಾಪಮಾನ ಹೊಂದಿದ್ದು, ಇದನ್ನು ತಗ್ಗಿಸುವ ಸಲುವಾಗಿ ಪ್ರತಿ ವರ್ಷ ಸುಮಾರು 1 ಲಕ್ಷ ಗಿಡಗಳನ್ನು ನೆಡುವ ಗುರಿಯನ್ನು ಹೊಂದಲಾಗಿದೆ. ಅದರಲ್ಲೂ ಸರಕಾರಿ ಶಾಲೆಗಳನ್ನೇ ಹಸಿರುಕರಣ ಮಾಡಲು ಮೊದಲ ಆದ್ಯತೆ ನೀಡುತ್ತಿದ್ದೇವೆ. ಇದೇ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎಲ್ಲಾ ಸರಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಗಿಡ ಮರಗಳನ್ನು ಬೆಳಸಬೇಕು ಎಂಬ ಸದುದ್ದೇಶದಿಂದ ನಮ್ಮ ವನಸಿರಿ ತಂಡದಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ 5 ಸಾವಿರ ಸಸಿಗಳನ್ನು ಸರಕಾರಿ ಶಾಲೆಗಳಲ್ಲೇ ನೆಡಬೇಕೆಂಬುದು ನಮ್ಮ ಧ್ಯೇಯವಾಗಿದೆ.ಇದೇ ಜೂನ್ 4 ರಂದು ಸಿಂಧನೂರು ನಗರದ PWD ಕ್ಯಾಂಪ್ ನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಾಲಯದ ಹತ್ತಿರ 5 ಸಾವಿರ ಸಸಿಗಳನ್ನು ಉಚಿತವಾಗಿ ನೀಡುತಿದ್ದೇವೆ. ಎಲ್ಲಾ ಸರಕಾರಿ ಶಾಲೆಗಳ ಶಿಕ್ಷಕರು, ಇದರ ಸದುಪಯೋಗವನ್ನು ಪಡೆದು ಕೊಳ್ಳಬೇಕು ಎಂದು ಮನವಿ ಮಾಡಿದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button