ಕರಕುಚ್ಚಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುತ್ತೇನೆ – ಜಿ.ಎಚ್.ಶ್ರೀನಿವಾಸ್.

ತರೀಕೆರೆ ಮಾರ್ಚ್.9

ಕರಕುಚ್ಚಿ ಗ್ರಾಮಕ್ಕೆ ಸ್ಮಶಾನ ಮತ್ತು ಗಣ ತ್ಯಾಜ್ಯ ವಿಲೋವಾರಿ ಘಟಕಕ್ಕೆ ಜಮೀನು ಕೊಡಲು ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಯವರಿಂದ ಜಂಟಿ ಸರ್ವೆ ಮಾಡಿಸಿ ಮಂಜೂರಾತಿ ಮಾಡಿಸುತ್ತೇನೆ ಎಂದು ಶಾಸಕ ಜಿ ಎಚ್ ಶ್ರೀನಿವಾಸ್ ಹೇಳಿದರು. ಅವರು ಇಂದು ಕರಕುಚ್ಚಿ ಏ ಕಾಲೋನಿ ಶಾಲಾ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಚಿಕ್ಕಮಗಳೂರು ಮತ್ತು ತಾಲೂಕು ಪಂಚಾಯಿತಿ ತರೀಕೆರೆ, ಗ್ರಾಮ ಪಂಚಾಯಿತಿ ಕರಕುಚ್ಚಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಕ್ಷರದಲ್ಲಿ ಏರ್ಪಡಿಸಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಹಾಗೂ ಸಾರ್ವಜನಿಕರ ದೇಣಿಗೆಯೊಂದಿಗೆ ಭಾರತ್ ನಿರ್ಮಾಣ ಸೇವಾ ಕೇಂದ್ರ, ಅಂಗನವಾಡಿ ಕಟ್ಟಡ ಹಾಗೂ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ನಿರ್ಮಿಸಿರುವ ಗರಡಿ ಮನೆ ಮತ್ತು ಸಮುದಾಯ ಭವನ ಕಟ್ಟಡಗಳ ಉದ್ಘಾಟನೆ ಸಮಾರಂಭವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿನ ಸಮಸ್ಯೆಗೆ 80 ಲಕ್ಷ ರೂಗಳ ಕಾಮಗಾರಿಗೆ ಟೆಂಡರ್ ಆಗಿದೆ ಕೆಲವೇ ದಿನಗಳಲ್ಲಿ ಕೆಲಸ ಪ್ರಾರಂಭವಾಗಲಿದೆ.

ಅಂತರ್ಜಲ ಮತ್ತು ಜಲಾಶಯದಲ್ಲಿ ನೀರು ಇಲ್ಲದೆ ಇರುವುದರಿಂದ ಪರ್ಯಾಯ ವ್ಯವಸ್ಥೆ ಮಾಡಿ ಕರಕುಚ್ಚಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುತ್ತೇನೆ. ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಇ -ಖಾತೆಯನ್ನು ಮಾಡಿ ಕೊಡಬೇಕು. ಮತ್ತು ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸ ಬೇಕು. ರಾಜ್ಯದಲ್ಲಿ ಬರಗಾಲ ಇರುವುದರಿಂದ ನೀರನ್ನು ಮಿತವಾಗಿ ಬಳಸಿರಿ. ಗರಡಿ ಮನೆ ಜಿಮ್ ಅನ್ನು ಯುವಕರು ಬಳಸಿ ಕೊಳ್ಳಬೇಕು, ಆರೋಗ್ಯವಂತರಾಗಿ ಸದೃಢರಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆ, ಯುವ ನಿಧಿ, ಉಚಿತ ವಿದ್ಯುತ್ ಯೋಜನೆ, ಹಾಗೂ ಶಕ್ತಿ ಯೋಜನೆ ಜಾರಿ ಮಾಡಿದ್ದು ನೀವೆಲ್ಲರೂ ನಮ್ಮ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಆಶೀರ್ವದಿಸ ಬೇಕು ಎಂದು ಹೇಳಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ ಪಿ ಪ್ರಕಾಶ್, ಉಪಾಧ್ಯಕ್ಷರಾದ ರೇಖಾ ನವೀನ್, ಸದಸ್ಯರಾದ ಕೆಎಚ್ ಮೋಹನ್ ಕುಮಾರ್ ಮಾತನಾಡಿದರು. ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಟಿ ಎಸ್ ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಶಾಂತಿಬಾಯಿ ಗೋವಿಂದ ನಾಯ್ಕ, ರತ್ನಮ್ಮ, ಕೆಪಿ ತಮ್ಮಣ್ಣ, ಸುಜಾತ ರಮೇಶ್, ಎಂ ಮಹೇಶ್, ಸುಜಾತ ಗೋವಿಂದಪ್ಪ, ಎಂ ಮೋಹನ್, ಪದ್ಮ ಕೃಷ್ಣಮೂರ್ತಿ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಯೋಗೀಶ್, ಪುರಸಭಾ ಮಾಜಿ ಅಧ್ಯಕ್ಷರಾದ ಪ್ರಕಾಶ್ ವರ್ಮಾ, ಪಿಡಿಒ ಮಮ್ಮುಸ, ಸಹಾಯಕ ಲೆಕ್ಕಾಧಿಕಾರಿ ಯಶೋಧ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದಾನಿಗಳಿಗೆ ಸನ್ಮಾನ ಮಾಡಲಾಯಿತು, ಶಾಲಾ ಮಕ್ಕಳು ಪ್ರಾರ್ಥಿಸಿ, ಶಿಕ್ಷಕರಾದ ಶಿವಕುಮಾರ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್.ವೆಂಕಟೇಶ್.ತರೀಕೆರೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button