ನಾರಿ ಶಕ್ತಿ ಸಮಾವೇಶ ಹಾಗೂ ಸಾಧಕಿಯರಿಗೆ ಸನ್ಮಾನ ಸಮಾರಂಭ.
ಇಲಕಲ್ಲ ಮಾರ್ಚ್.11

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಳಕಲ್ ನಗರದ ಶ್ರೀ ವಿಜಯಮಹಾಂತೇಶ ದಾಸೋಹ ಭವನದಲ್ಲಿ ವಿ.ವಿ.ಕೆ ಫೌಂಡೇಶನ್ ಅಧ್ಯಕ್ಷರಾದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ ಅವರ ವತಿಯಿಂದ ಬಾಗಲಕೋಟೆ ನಾರಿ ಶಕ್ತಿ ಸಮಾವೇಶ ಹಾಗೂ ಸಾಧಕಿಯರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಮ.ನಿ.ಪ್ರ ಗುರು ಮಹಾಂತ ಸ್ವಾಮೀಜಿಗಳು, ಶಿರೂರ ಮಠದ ಗುರು ಬಸವಲಿಂಗ ಸ್ವಾಮೀಜಿಗಳು ವಹಿಸಿಕೊಂಡಿದ್ದರು.ಶ್ರೀಮತಿ ಇಂದುಮತಿ ಸಾಲಿಮಠ ಹಾಗೂ ಭವ್ಯಾ ನರಸಿಂಹಮೂರ್ತಿ ಮಹಿಳೆಯರ ಕುರಿತು ಉಪನ್ಯಾಸ ನೀಡಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಲಾಯಿತು. ನಗರಸಭೆ ಸದಸ್ಯರು, ಹಿರಿಯ ಮುಖಂಡರು, ಮಹಿಳಾ ಮುಖಂಡರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ