ಹೊಸಪೇಟೆ ಎ.ಪಿ.ಎಂ.ಸಿ ಪ್ರಾಂಗಣದಲ್ಲಿ ರಾಗಿ,ಜೋಳ ಖರೀದಿ ಪ್ರಕ್ರಿಯೆ ಆರಂಭ – ಜಿಲ್ಲಾಧಿಕಾರಿ ಪರೀಶೀಲನೆ.

ಹೊಸಪೇಟೆ ಮಾರ್ಚ್.18

ಹೊಸಪೇಟೆ ಎಪಿಎಂಸಿ ಪ್ರಾಂಗಣದಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ರಾಗಿ ಮತ್ತು ಜೋಳದ ಖರೀದಿ ಪ್ರಕ್ರಿಯೆ ಮಾರ್ಚ 18 ರಂದು ಪ್ರಾರಂಭವಾಯಿತು.ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಮಾರ್ಚ 18 ರಂದು ಎಪಿಎಂಸಿ ಪ್ರಾಂಗಣಕ್ಕೆ ಭೇಟಿ ನೀಡಿ, ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಮೂಲಕ ರೈತರಿಂದ ರಾಗಿ ಮತ್ತು ಜೋಳ ಖರೀದಿಸುವ ಪ್ರಕ್ರಿಯೆ ಬಗ್ಗೆ ಮಾಹಿತಿ ಪಡೆದರು.ಪ್ರಸ್ತುತ ಈ ಖರೀದಿ ಕೇಂದ್ರದಲ್ಲಿ 59 ರೈತರು 1132.50 ಕ್ವಿಂಟಾಲ್ ರಾಗಿಯನ್ನು, 23 ರೈತರು 910 ಕ್ವಿಂಟಾಲ್ ಬಿಳಿ ಜೋಳವನ್ನು ನೋಂದಾಯಿಸಿದ್ದಾರೆ. ಸರ್ಕಾರವು ಈ ಬಾರಿ ಎಫ್.ಎ.ಕ್ಯೂ. ಗುಣಮಟ್ಟದ ಪ್ರತಿ ಕ್ವಿಂಟಾಲ್ ರಾಗಿಗೆ 3,846 ರೂ. ಮತ್ತು ಎಫ್.ಎ.ಕ್ಯೂ. ಗುಣಮಟ್ಟದ ಜೋಳಕ್ಕೆ 3180 ರೂ.ಗಳನ್ನು ಘೋಷಿಸಿರುತ್ತದೆ ಎಂದು ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2022-23 ನೇ ಸಾಲಿನಲ್ಲಿ ಹೊಸಪೇಟೆ ಖರೀದಿ ಕೇಂದ್ರವು ಆರಂಭವಾಗಿದೆ. 2022-23 ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತ, ರಾಗಿ ಮತ್ತು ಜೋಳ ಉತ್ಪನ್ನಗಳನ್ನು ಖರೀದಿಸಲು ವಿಜಯನಗರ ಜಿಲ್ಲೆಗೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯು ಖರೀದಿ ಎಜೆನ್ಸಿ ಯಾಗಿರುತ್ತದೆ. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯು ವಿಜಯನಗರ ಜಿಲ್ಲೆಯ ಹೊಸಪೇಟೆ ಎಪಿಎಂಸಿ ಪ್ರಾಂಗಣದಲ್ಲಿ ಡಿಸೆಂಬರ್ 1 ರಿಂದ ನೋಂದಣಿ ಕೇಂದ್ರವನ್ನು ತೆರೆದಿರುತ್ತದೆ ಎಂದು ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.ಖರೀದಿ ಮಾಡಿದ ಉತ್ಪನ್ನವನ್ನು ಸರ್ಕಾರವು ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಉದ್ದೇಶ ವಿರುವುದರಿಂದ ರಾಗಿ ಮತ್ತು ಜೋಳವನ್ನು ಬೆಳೆದ ರೈತರು ತಾವು ಬೆಳೆದ ಉತ್ಪನ್ನವನ್ನು ಚೆನ್ನಾಗಿ ಒಣಗಿಸಿ, ಯಾವುದೇ ಕಸ, ಕಡ್ಡಿ, ಧೂಳು, ಮಣ್ಣಿರದಂತೆ ಸ್ವಚ್ಚಗೊಳಿಸಿ ಖರೀದಿ ಕೇಂದ್ರಗಳಿಗೆ ತರಲು ರೈತರಲ್ಲಿ ಮನವಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದರು.ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ, ಕೃಷಿ ಮಾರಾಟ ಮಂಡಳಿಯ ಸಿದ್ದು ಸ್ವಾಮಿ, ಖರೀದಿ ಏಜೆನ್ಸಿದಾರರು, ಜಿಲ್ಲಾ ವ್ಯವಸ್ಥಾಪಕರು ಈ ಸಂದರ್ಭದಲ್ಲಿ ಇದ್ದರು.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಮಾಲತೇಶ್.ಶೆಟ್ಟರ್.ಹೊಸಪೇಟೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button