ಕುಡಿಯಲು ನೀರಿಲ್ಲ, ನಮಗೆ ನೀರು ಕೊಡಿ ಎಂದು ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯಿತಿಗೆ ಬಂದ – ಮಹಿಳೆಯರು!

ನಂದವಾಡಗಿ ಮಾರ್ಚ್.18

ಇಲಕಲ್ ತಾಲೂಕಿನ ನಂದವಾಡಗಿ ಗ್ರಾಮದ ಕುಡಿಯುವ ನೀರಿಗಾಗಿ ಜನರು ಗೋಳಾಡುತ್ತಿದ್ದಾರೆ. ನೀರು ಪೂರೈಸದ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಲಿ ಕೊಡ ಹಿಡಿದುಕೊಂಡು ಗ್ರಾಮ ಪಂಚಾಯಿತಿ ಬಳಿ ಪ್ರತಿಭಟನೆ ನಡೆಸಿದರು. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದಾವಡಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನೀರು ಪೂರೈಕೆ ಆಗುತ್ತಿಲ್ಲ, ನೀವೇನು ಕೆಲಸ ಮಾಡುತ್ತಿದ್ದೀರಿ? ಎಂದು ಮಹಿಳೆಯರು ಪ್ರಶ್ನಿಸಿದ್ದಾರೆ.

“ಪಿಡಿಒ ನಿರ್ಲಕ್ಷ್ಯ” ಕೂಡಿಯುವ ನೀರಿಗಾಗಿ ನಂದವಾಡಗಿ ಗ್ರಾಮದ ಜನರ ನೀರಿಗಾಗಿ ಪರದಾಡುವಂತಾಗಿದೆ ಕುಡಿಯುವ ನೀರಿಗಾಗಿ ಸುಮಾರು ವರ್ಷಗಳಿಂದ ಜನರು ತುಂಬಾ ಸಂಕಷ್ಟದಿಂದ ಪರದಾಟವನ್ನು ಅನುಭವಿಸುತ್ತಾ ಇದ್ದಾರೆ. ಹಾಗೆ ಎಷ್ಟು ಸಾರಿ ಗ್ರಾಮ ಪಂಚಾಯತಿ ಸದಸ್ಯರಿಗೂ ಅಧ್ಯಕ್ಷರಗೂ ಹಾಗೂ ಪಿಡಿಒ ಗಮನಕ್ಕೆ ತಂದರು ಸಹ “ದಿವ್ಯ ನಿರ್ಲಕ್ಷ್ಯವಹಿಸಿದ್ದಾರೆ”. ಇಲ್ಲಿಯ ಜನರು ಸುಮಾರು ವರ್ಷಗಳಿಂದ ಪರಿಸ್ಥಿತಿ ಹೀಗೆ ಉಂಟಾಗಿದೆ. ನಲ್ಲಿ ನೀರು ಇಲ್ಲವೆಂದರೆ ಉಪ್ಪು ನೀರು ಕುಡಿಯುವ ಪರಿಸ್ಥಿತಿ ಬಂದಿದೆ ಅದಕ್ಕೆ ಎಲ್ಲಾ ಜನರು ಗ್ರಾಮ ಪಂಚಾಯಿತಿಗೆ ಬಂದು ನಮಗೆ ಕುಡಿಯೋಕೆ ನೀರು ಕೊಡಿ ಇಲ್ಲವಾದರೆ ನಂದವಾಡಗಿ ಏತು ನೀರಾವರಿ ಸಂಪೂರ್ಣ ನೀರು ಹರಿಸಿ ಎಂದು ಗ್ರಾಮದ ಜನರು ಬೇಡಿಕೊಂಡರು ಗ್ರಾಮ ಪಂಚಾಯಿತಿಯ ಮುಂದೆ ಪಂಚಾಯಿತಿಗೆ ಬೀಗ ಜಡಿದು ಉಗ್ರ ಹೋರಾಟ ಮಾಡ ಬೇಕಾಗುತ್ತದೆ ಎಂದು ಜನರು ಎಚ್ಚರಿಕೆಯನ್ನು ನೀಡಿದರು.

ಗ್ರಾಮದ ಪಂಚಾಯತಿ ಕಚೇರಿಯ ಮುಂದೆ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಸೋಮವಾರ ದಂದು ಪ್ರತಿಭಟನೆ ನಡೆಸಿದರು.ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಈ ಪ್ರತಿಭಟನೆಯಲ್ಲಿ ಕುಡಿಯುವ ನೀರು ಸಿಗದೇ ಗ್ರಾಮಸ್ಥರು ಪರದಾಡುತ್ತಿದ್ದಾರೆ ಯಾವುದೇ ಮೂಲದಿಂದಾರೂ ಕುಡಿಯುವ ನೀರು ಪೂರೈಕೆ ಮಾಡಿ ಎಂದು ಮಹಿಳೆಯರು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಜಿಲ್ಲಾಡಳಿತ ಯಾವುದೇ ಭಾಗದಲ್ಲಿ ಕುಡಿಯುವ ನೀರು ಸಿಗದೇ ಜನ ಜಾನವಾರು ಇರದಂತೆ ನೋಡಿ ಕೊಳ್ಳಿ ಎಂದು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದರೂ ಪಂಚಾಯತಿ ಅಧಿಕಾರಿಗಳು ಕಣ್ಣು ಕಿವಿ ಮುಚ್ಚಿಕೊಂಡು ಕುಳಿತಿದ್ದಾರೆ ಎಂದು ಗ್ರಾಮಸ್ಥರ ತಿಳಿಸಿದರು.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರತಾಪ್.ವಾಯ್.ಕಿಳ್ಳಿ. ಇಲಕಲ್ಲ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button