ವೀಣಾ ಕಾಶಪ್ಪನವರಿಗೆ ಎಂ.ಪಿ ಟಿಕೆಟ್ ನೀಡುಲು – ಡಿ.ವಿ.ಎಫ್ ಜಿಲ್ಲಾ ಸಮಿತಿ ಆಗ್ರಹ.
ಗಂಗೂರು ಮಾರ್ಚ್.19

ಬಾಗಲಕೋಟೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರುಗಳಿಗೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತರಿಗೆ ಲೋಕಸಭಾ ಟಿಕೆಟ್ ಆಕಾಂಕ್ಷಿ ಅಭ್ಯರ್ಥಿಗಳಿಗೆ ಬಾಗಲಕೋಟೆಗೆ ಸ್ವಂತ ಜಿಲ್ಲೆಯವರಿಗೆ ಟಿಕೆಟ್ ಕೊಡಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರುಗಳಾದ ಮಾನ್ಯಶ್ರೀ ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೆ ಮತ್ತು ಮಾನ್ಯಶ್ರೀ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸಾಹೇಬರಿಗೆ ಮತ್ತು ಪಕ್ಷದ ಅಧ್ಯಕ್ಷರುಗಳಾದ/ ಉಪಮುಖ್ಯಮಂತ್ರಿಗಳಾದ ಮಾನ್ಯಶ್ರೀ ಡಿ ಕೆ ಶಿವಕುಮಾರ್ ಸಾಹೇಬರರಲ್ಲಿ ನಮ್ಮ ಒತ್ತಾಯ ಬಾಗಲಕೋಟೆಯ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವೀಣಾ ವಿ ಕಾಶಪ್ಪನವರಿಗೆ ಮತ್ತೊಮ್ಮೆ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಬೇಕು. ಈಗಾಗಲೇ ಜಿಲ್ಲೆಯಲ್ಲಿ ತನ್ನದೇಯಾದ ಅಭಿಮಾನಿ ಬಳಗವನ್ನು ಕಟ್ಟಿ ಜಿಲ್ಲೆಯಲ್ಲಿ ಹಿಂದುಳಿದ ದಲಿತರ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಪರ ಹಾಗೂ ರೈತರ ಪರವಾಗಿ ಹಗಲು ಇರುಳು ಶ್ರಮವಯಿಸಿ ಅವರ ಕುಂದು ಕೊರತೆಗಳಿಗೆ ಸ್ಪಂದನೆ ಮಾಡುತ್ತಿರುವ ವೀಣಾ ಕಾಶಪ್ಪನವರಗೆ ಈ ಬಾರಿಯ ಲೋಕಸಭಾ ಟಿಕೆಟ್ ಕೊಡಬೇಕು ಅವರ ಗೆಲುವಿಗಾಗಿ ಹಾಗೂ ಜಿಲ್ಲೆಯ ಅಭಿವೃದ್ದಿಗಾಗಿ ವಿವಿಧ ಸಂಘಟನೆಗಳು ಒಗ್ಗಟ್ಟಾಗಿ ಅವರ ಪರವಾಗಿ ನಿಲ್ಲುತ್ತೇವೆ ಅಭಿವೃದ್ದಿಯ ಹಾಗೂ ಜಿಲ್ಲೆಯ ಬೆಳವಣಿಗೆಯ ಬಗ್ಗೆ ಅಪಾರ ಕನಸ್ಸು ಕಂಡಿರುವ ವೀಣಾ ಕಾಶಪ್ಪನವರಿಗೆ ಟಿಕೆಟ್ ನೀಡಬೇಕೆಂದು ಬಸವರಾಜ ಗಂಗೂರು ಜಿಲ್ಲಾ ಅಧ್ಯಕ್ಷರು, ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿಯು ಆಗ್ರಹಿಸುತ್ತದೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ. ಹುನಗುಂದ