85 ವರ್ಷ ಮೇಲ್ಪಟ್ಟ ಮತ್ತು ವಿಶೇಷ ಚೇತನರ ಮತದಾನ ಕುರಿತು ತರಬೇತಿ ಜವಾಬ್ದಾರಿ ಯಿಂದ ಚುನಾವಣೆ ಕರ್ತವ್ಯ ನಿರ್ವಹಿಸಿ – ಎಸಿ ಅಬೀದ್ ಗದ್ಯಾಳ.

ಇಂಡಿ ಮಾರ್ಚ್.21

ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟು ನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣೆ ಕರ್ತವ್ಯಗಳಿಗೆ ನಿಯೋಜನೆ ಗೊಂಡಿರುವ ಅಧಿಕಾರಿಗಳು ಜವಾಬ್ದಾರಿ ಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಸಹಾಯಕ ಚುನಾವಣೆ ಅಧಿಕಾರಿ ಕಂದಾಯ ಉಪ ವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಪಟ್ಟಣದ ಶ್ರೀ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ೮೫ ವರ್ಷ ಮೇಲ್ಪಟ್ಟ ಮತ್ತು ವಿಶೇಷ ಚೇತನರ ಮತದಾನ ಕುರಿತು ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಶಿಬಿರದಲ್ಲಿ ಮಾತನಾಡುತ್ತಿದ್ದರು.

ಮತದಾರರ ಪಟ್ಟಿಯ ಅನುಸಾರ ಬೂತ್ ಮಟ್ಟದ ಅಧಿಕಾರಿಗಳು ಮಾ.೨೨ ರಿಂದ ೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಹಾಗೂ ವಿಶೇಷ ಚೇತನರ ಮನೆ ಮನೆಗೆ ಭೇಟಿ ನೀಡಿ ೧೨ ಡಿ ಅರ್ಜಿಗಳನ್ನು ಭರ್ತಿ ಮಾಡಬೇಕು. ಅಂಚೆ ಮತದಾನಕ್ಕೆ ೧೨ ಡಿ ಮೂಲಕ ದೃಡಿಕರಿಸಿದವರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಅವಕಾಶ ವಿರುವುದಿಲ್ಲ.ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಶೇ ೪೦ ಕ್ಕಿಂತ ಹೆಚ್ಚು ಅಂಗವೈಕಲ್ಯ ಕ್ಕೀಡಾಗಿರುವ ವಿಶೇಷ ಚೇತನರು ಮಾತ್ರ ಅಂಚೆ ಮತದಾನ ಸೌಲಭ್ಯಕ್ಕೆ ಅರ್ಹ ರಾಗಿರುತ್ತಾರೆ. ಚುನಾವಣೆ ಅಧಿಸೂಚನೆಯ ನಂತರದ ೫ ದಿನದೊಳಗೆ ಭರ್ತಿ ಮಾಡಿದ ದೃಢೀಕೃತ ೧೨ ಡಿ ನಮೂನೆಯನ್ನು ಸಂಬಂಧಪಟ್ಟ ಚುನಾವಣೆ ಅಧಿಕಾರಿಗೆ ಸಲ್ಲಿಸಬೇಕು ಎಂದು ಗದ್ಯಾಳ ಹೇಳಿದರು.೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಶೇ ೪೦ ಕ್ಕಿಂತ ಹೆಚ್ಚು ಅಂಗವೈಕಲ್ಯ ಕ್ಕೀಡಾಗಿರುವ ಮತದಾರರಿಗೆ ೧೨ ಡಿ ತುಂಬಿ ಕೊಟ್ಟವರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ನೀಡಲಾಗಿದೆ ಎಂದರು. ತಹಸೀಲ್ದಾರ ಮಂಜುಳಾ ನಾಯಕ, ಬಿಆರ್‌ಸಿ ಕೋ ಆರ್ಡಿನೇಟರ್ ಎಸ್.ಆರ್.ನಡಗಡ್ಡಿ, ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ ದೇವೂರ, ಚುನಾವಣೆ ಶಿರಸ್ತೆದಾರ ಆರ್.ಬಿ. ಮೂಗಿ ಮತ್ತಿತರಿದ್ದರು.

ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಶಿವಪ್ಪ.ಬಿ.ಹರಿಜನ.ಇಂಡಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button