ನೇಮಕಾತಿ ಆದೇಶ ಪತ್ರಿಕಾ ಪ್ರಕಟಣೆ.
ಬಸವನ ಬಾಗೇವಾಡಿ ಮಾರ್ಚ್.23

ಕರ್ನಾಟಕ ಪ್ರದೇಶ ಕಾಂಗ್ರೇಸ್ ಪಕ್ಷದ, ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾದ ಶ್ರೀ ಧರ್ಮಸೇನರವರ ಆದೇಶದ ಮೇರೆಗೆ ಶ್ರೀ ಸಂಜು ಬಸಪ್ಪ ಕಲ್ಯಾಣಿ. ಸಾ: ಬಸವನ ಬಾಗೇವಾಡಿ ಆದ ತಮ್ಮನ್ನು ವಿಜಯಪುರ ಜಿಲ್ಲಾ ಕಾಂಗ್ರೇಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿತನಾಗಿದ್ದೇನೆ.

ತಾವುಗಳು ಈ ಕೂಡಲೇ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೇಸ್ ಸಮಿತಿಗಳ ಮಾರ್ಗ ದರ್ಶನದಲ್ಲಿ ತಮ್ಮ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗ ಬೇಕೆಂದು ಸೂಚಿಸಲಾಗಿದೆ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ವಿ ಸಿಗಲೆಂದು ಹಾರೈಸುತ್ತೇನೆ ಎಂದು ಈ ಮೂಲಕ ಪತ್ರಿಕಾ ಪ್ರಕಟಣೆಗೆ ಹೊರಡಿಸಿದ್ದಾರೆ.