ನರೇಗಾ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ.
ಚಿಕ್ಕ ಬಾದವಾಡಗಿ ಏಪ್ರಿಲ್.17

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಬಾದವಾಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಾದವಾಡಗಿ ಗ್ರಾಮದಲ್ಲಿ ಬದು ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಹಾಗೂ ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ ಆಯೋಜಿಸಲಾಗಿತ್ತು. ಕಾರ್ಯ ನಿರ್ವಾಹಕ ಅಧಿಕಾರಿ ತಾರಾ ಎನ್ ಅವರು ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಿ, ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು. ಜೊತೆಗೆ ಕೂಲಿ ಗುಳೆ ಹೋಗದಂತೆ ತಡೆಯಲು ನಿಮ್ಮೂರಲ್ಲೇ ನರೇಗಾ ಯೋಜನೆಯಡಿ ಕೂಲಿ ಕೆಲಸ ಸಿಗುತ್ತಿರುವ ಮಾಹಿತಿ ನೀಡಿದರು. ಬಳಿಕ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿ ರಾಘವೇಂದ್ರ ಜಾಧವ್ , ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಪಿ ನಂಜಯ್ಯನಮಠ, ತಾಪಂ ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣಾಜಿ ಪವಾರ್ ,ಕೃಷಿ ಇಲಾಖೆ ತಾಂತ್ರಿಕ ಸಹಾಯಕ ದೇವೇಂದ್ರಪ್ಪ ಬಿಲಕುಂದಿ , ಬಿಎಫ್ ಟಿ ಶಿವು ಗೌಡರ , ಕಾಯಕ ಮಿತ್ರ ಬಸಮ್ಮ ಕಂಬಳಿ, ಬಿಲ್ ಕಲೆಕ್ಟರ್ ಯಮನಪ್ಪ ಮಾದರ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಕಾಯಕ ಬಂಧುಗಳು ಉಪಸ್ಥಿತರಿದ್ದರು.