ಅಮರಾವತಿಯಲ್ಲಿ ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನ.
ಅಮರಾವತಿ ಮಾರ್ಚ್.27

ಹುನಗುಂದ ತಾಲೂಕಿನ ಅಮರಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ “ವಲಸೇ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನದಡಿ” ಹಾಗೂ ಮತದಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಮಾತನಾಡಿದ ಐಇಸಿ ಸಂಯೋಜಕ ಬಸವರಾಜ ಕೊಪ್ಪದ ಕಾಯಕ ಬಂಧುಗಳಿಗೆ ಫಾರ್ಮ್ ನಂ 6 ನೀಡಿ ಏಪ್ರಿಲ್ ಯಿಂದ ಮನರೇಗಾ ಕೂಲಿ ಕೆಲಸಕ್ಕೆ ಬರುವಂತೆ ತಿಳಿಸಲಾಯಿತು. ಜೊತೆಗೆ ABPS ಆಗದ ಕೂಲಿ ಕಾರ್ಮಿಕರಿಗೆ ABPS ಮಾಡಿಸಲು ಸೂಚಿಸಲಾಯಿತು. ಜೊತೆಗೆ ಬದಲಾದ ಈ ಏಕೀಕೃತ ಸಹಾಯವಾಣಿ 8277506000 ಬಗ್ಗೆ ಮಾಹಿತಿ ನೀಡಲಾಯಿತು.ಇನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್. ಜಿ ಹಿರೇಮಠ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಸೂಕ್ತ ಹಾಗೂ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಅಭ್ಯರ್ಥಿಗಳಿಗೆ ಮತ ನೀಡಿ, ಜೊತೆಗೆ ಕಡ್ಡಾಯವಾಗಿ ಮತದಾನ ಮಾಡಲು ತಿಳಿಸಿದರು.ಈ ಸಂದರ್ಭದಲ್ಲಿ ಐಇಸಿ ಸಂಯೋಜಕ ಬಸವರಾಜ ಕೊಪ್ಪದ , ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್. ಜಿ ಹಿರೇಮಠ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.