ಕಾಂಗ್ರೇಸ್ ಪಕ್ಷಕ್ಕೆ ಹಾಯ್, ಹಾಯ್, ಜೆಡಿಎಸ್ ಪಕ್ಷಕ್ಕೆ ಗುಡ್ ಬೈ, ಮಾಜಿ ಸಚಿವರು ಎನ್.ಎಂ. ನಬಿ ಮತ್ತು ಸಹಚರರು.

ಕೂಡ್ಲಿಗಿ ಮಾರ್ಚ್.30

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ಮೈತ್ರಿ ಮಾಡಿ ಕೊಂಡಿರುವುದಕ್ಕೆ ಅಸಮಾಧಾನ ಸೂಚಿಸಿ ಜೆಡಿಎಸ್‌ ರಾಜ್ಯ ಕಾರ್ಯಾಧ್ಯಕ್ಷರಾಗಿದ್ದ, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರಾದ ಎನ್ ಎಂ ನಬಿ ಹಾಗೂ ಜೆಡಿಎಸ್ ರಾಜ್ಯ ಯುವ ಕಾರ್ಯಾಧ್ಯಕ್ಷ ಎನ್ ಎಂ ನೂರು ಅಹ್ಮದ್ , ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.ಬಿಜೆಪಿ ಜೊತೆಗಿನ ಮೈತ್ರಿಯಿಂದಾಗಿ ಜೆಡಿಎಸ್‌ನ ಪಕ್ಷದ ಸಿದ್ದಂತಾಗಳನ್ನು ಬಿಟ್ಟು ಅನೇಕ ಕಾರ್ಯಕರ್ತರು ಹಾಗೂ ಸಾಮಾನ್ಯ ಜನ ಮಂದಿಗೆ ಇನ್ನೂ ಅಸಮಾಧಾನವಿದೆ. ಹಾಗಾಗಿ, ಕೆಲವೇ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅಥವಾ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಹಲವು ಮುಖಂಡರು ಹಾಲಿ ಜೆಡಿಎಸ್ ಕಾರ್ಪೊರೇಟರ್ ಹಾಗೂ ಇತರೆ ಸ್ಥಳೀಯ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ” ಎಂದು ಎನ್ ಎಂ ನೂರ ಅಹ್ಮದ್ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಈ ದಿನ ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಚಿವರು ಎನ್ ಎಂ ನಬಿ, “ಜೆಡಿಎಸ್‌ ಪಕ್ಷದ ಮುಖಂಡರು ಕೋಮುವಾದಿ ಪಕ್ಷವಾಗಿರುವ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದಾರೆ. ಇದಕ್ಕೆ ನಮ್ಮ ಸಹಮತವಿಲ್ಲ. ಹಾಗಾಗಿ, ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಸೇರ್ಪಡೆ ಗೊಂಡಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಯನ್ನು ಸೋಲಿಸಲು ನನ್ನಿಂದಾದ ಕಾರ್ಯವನ್ನು ಕಾಂಗ್ರೆಸ್ ನೊಂದಿಗೆ ಸೇರಿ ಕೊಂಡು ಶಕ್ತಿ ಮೀರಿ ಲೋಕಸಭಾ ಚುನಾವಣೆ ಮಾಡುತ್ತೇನೆ. ದೇಶದಲ್ಲಿ ಕೋಮುವಾದದ ವಿರುದ್ಧ ನನ್ನ ಹೋರಾಟ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.ಮಾಜಿ ಸಚಿವ ಎನ್ಎಂ ನಬಿ ಅವರೊಂದಿಗೆ ಜನತಾದಳದ ಜೆಡಿಎಸ್‌ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಯಾಗಿದ್ದ, ಯುವ ನಾಯಕಿ ನಜ್ಮಾ ನಝೀರ್ ಚಿಕ್ಕನೇರಳೆ, ಸಹಿತ ಸುಮಾರು 50 ಮಂದಿ ಜೆಡಿಎಸ್ ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆ ಗೊಂಡಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಯುವಕಾರ್ಯ ಅಧ್ಯಕ್ಷ ಎನ್ಎಂ ನೂರ ಅಹ್ಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ರಾಘವೇಂದ್ರ.ಬಿ.ಸಾಲುಮನೆ. ಕೂಡ್ಲಿಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button