ನಿವೃತ್ತಿಯು ಪ್ರತಿಯೊಬ್ಬ ವ್ಯಕ್ತಿಯ ಜೀವನದ ಮಹತ್ವದ ಮೈಲಿಗಲ್ಲು – ಪುಂಡಲೀಕ ಮಾನವರ.

ಇಂಡಿ ಏಪ್ರಿಲ್.03

ಸರಕಾರ ನಿಯಮದ ಅನುಸಾರ ಪ್ರತಿ ವ್ಯಕ್ತಿಯು ವೃತ್ತಿಯಿಂದ ನಿವೃತಿ ಹೊಂದಬೇಕು. ಹೀಗಾಗಿ ನಿವೃತ್ತಿಯು ಪ್ರತಿಯೊಬ್ಬ ವ್ಯಕ್ತಿಯ ಜೀವನದ ಮಹತ್ವದ ಮೈಲುಗಲ್ಲು ಎಂದು ಸಮಾಜ ಕಲ್ಯಾಣ ಉಪನಿರ್ದೇಶಕ ಪುಂಡಲೀಕ ಮಾನವರ ಹೇಳಿದರು.ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಎಸ್.ಐ.ಶಾಬಾದಿ ಇವರಿಗೆ ವೃತ್ತಿಯಿಂದ ನಿವೃತ್ತಿಯಾಗುವ ಸಮಾರಂಭದಲ್ಲಿ ಮಾತನಾಡಿದರು.ನಿವೃತ್ತ ಶಾಬಾದಿಯವರು ಮಾತನಾಡಿ, ಯೌವನದಲ್ಲಿ ಕಷ್ಟ ಪಟ್ಟು ದುಡಿದ ಪ್ರಯಾಣವು ಕೊನೆ ಗೊಂಡಿದೆ.ನಾನು ಸೇವೆ ಸಲ್ಲಿಸುವಾಗ ನೀಡಿದ ಹಿರಿಯ ಅಧಿಕಾರಿಗಳ ಮತ್ತು ಇಲಾಖೆಯ ಎಲ್ಲಾ ಸಿಬ್ಬಂದಿಯ ಸಹಕಾರ ಮರೆಯಲು ಅಸಾಧ್ಯ ಎಂದರು.ಇಂಡಿ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಜೆ.ಇಂಡಿ, ವಸತಿ ನಿಲಯ ಪಾಲಕ ಕುಲಪ್ಪ ಕೋರೆ, ಆನಂದ ಕಳಸಗೊಂಡ, ಶ್ರಿಮತಿ ಬಿರಾದಾರ ಶಾಬಾದಿಯವರು ಪ್ರಾಮಾಣಿಕ ಸೇವೆ ಕೊಂಡಾಡಿದರು.ಸಮಾರಂಭದಲ್ಲಿ ತಾಲೂಕಿನ ಎಲ್ಲ ವಸತಿ ನಿಲಯ ಪಾಲಕರು ಇಲಾಖೆಯ ಸಿಬ್ಬಂದಿ ಮತ್ತಿತರಿದ್ದರು.ಇದೇ ವೇಳೆ ಶಾಬಾದಿ ದಂಪತಿಗಳನ್ನು ಸನ್ಮಾನಿಸಲಾಯಿತು.

ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಶಿವಪ್ಪ.ಬಿ.ಹರಿಜನ.ಇಂಡಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button