ಮೂಗನೂರಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ.
ಮೂಗನೂರ ಏಪ್ರಿಲ್.14

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಳ್ಳ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಹಾಗೂ ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ ಆಯೋಜಿಸಲಾಗಿತ್ತು.ಕಾರ್ಯನಿರ್ವಾಹಕ ಅಧಿಕಾರಿ ತಾರಾ ಎನ್ ಅವರು ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಿ, ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು. ಬಳಿಕ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಜೊತೆಗೆ ಕೂಲಿ ಗುಳೆ ಹೋಗದಂತೆ ತಡೆಯಲು ನಿಮ್ಮೂರಲ್ಲೇ ನರೇಗಾ ಯೋಜನೆಯಡಿ ಕೂಲಿ ಕೆಲಸ ಹಾಗೂ ಸೌಲಭ್ಯಗಳ ಕುರಿತು ಸಿಗುತ್ತಿರುವ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುತ್ತಪ್ಪ ಛಲವಾದಿ, ಬಿಲ್ ಕಲೆಕ್ಟರ್ ಪರಸಪ್ಪ ಮುತ್ತತ್ತಿ , ಬಿಎಫ್ ಟಿ ಶಿವು ಗೌಡರ, ಹುಲ್ಲಮ್ಮ ವಡ್ಡರ, ಕಾಯಕ ಮಿತ್ರ ಜಯಶ್ರೀ ಮಾದರ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಕಾಯಕ ಬಂಧುಗಳು ಉಪಸ್ಥಿತರಿದ್ದರು.