ನರೇಗಾ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ, ಆರೋಗ್ಯ ಶಿಬಿರ.
ಐಹೊಳೆ ಏಪ್ರಿಲ್.16
![](https://i0.wp.com/sknewskannada.in/wp-content/uploads/2024/04/IMG-20240416-WA00611.jpg?resize=708%2C414&ssl=1)
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಐಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ, ವಲಸೇ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಕೆಎಚ್ ಪಿಟಿ ತಂಡ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ತಾರಾ ಎನ್ ಅವರು, ಸಹಾಯಕ ನಿರ್ದೇಶಕ ಮಹಾಂತೇಶ್ ಕೋಟಿ ಸಸಿಗೆ ನೀರುಣಿಸಿದರ ಮೂಲಕ ಚಾಲನೆ ನೀಡಿದರು.ಶಿಬಿರದಲ್ಲಿ ರಾಜ್ಯ ಕೆಎಚ್ ಪಿಟಿ ತಂಡ ಸಿಬ್ಬಂದಿ ಆರೋಗ್ಯ ತಪಾಸಣಾ ಶಿಬಿರದ ಮಹತ್ವದ ಕೂಲಿ ಕಾರ್ಮಿಕರ ಆರೋಗ್ಯದ ಬಗ್ಗೆ ತಿಳಿಸಿದರು. ಜೊತೆಗೆ ಮತದಾನದ ಬಗ್ಗೆ ಅರಿವು ಮೂಡಿಸಿದರು.ಇನ್ನು ಕಾರ್ಯನಿರ್ವಾಹಕ ಅಧಿಕಾರಿ ತಾರಾ ಎನ್ ಅವರು ಮತದಾನದ ಕುರಿತು ಜಾಗೃತಿ ಮೂಡಿಸಿದರು. ಜೊತೆಗೆ ನರೇಗಾ ಯೋಜನೆಯಡಿ ಸಿಗುತ್ತಿರುವ ಸೌಲಭ್ಯಗಳು, ಗುಳೆ ಹೋಗದಿರಲು ತಿಳಿಸಿದರು. ಬಳಿಕ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಇನ್ನು ಶಿಬಿರದಲ್ಲಿ ಕೂಲಿ ಕಾರ್ಮಿಕರಿಗೆ ಬಿಪಿ, ಶುಗರ್ ಸೇರಿದಂತೆ ಹಲವು ಆರೋಗ್ಯ ತಪಾಸಣೆಯನ್ನು ಸಿಬ್ಬಂದಿಗಳು ನಡೆಸಿದರು.ಈ ಸಂದರ್ಭದಲ್ಲಿ ರಾಜ್ಯ ಕೆಎಚ್ ಪಿಟಿ ತಂಡ, ಸಹಾಯಕ ನಿರ್ದೇಶಕರು(ಗ್ರಾ.ಉ) , ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು, ತಾಲೂಕ ಆರೋಗ್ಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ಗೋಡಿ, ತಾಂತ್ರಿಕ ಸಂಯೋಜಕ ನವೀನ ಹಂಚಾಟೆ , ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣಾಜಿ ಪವಾರ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಬಿ.ಎಫ್ ಟಿ ರಾಜು ವಾಲಿಕಾರ್ , ಕಾಯಕ ಮಿತ್ರ ಸುಮಂಗಲಾ ಐಹೊಳೆ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಕಾಯಕ ಬಂಧುಗಳು ಉಪಸ್ಥಿತರಿದ್ದರು.