ಇಂದು ಕಾನಾ ಹೊಸಹಳ್ಳಿ ಪಟ್ಟಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಗಮನ.
ಕಾನಾ ಹೊಸಹಳ್ಳಿ.16
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ಗ್ರಾಮಕ್ಕೆ ಮಾನ್ಯ ಬಿ.ಎಸ್ ಯಡಿಯೂರಪ್ಪನವರು ಹೊಸಹಳ್ಳಿ ಪಟ್ಟಣಕ್ಕೆ ಅಖಂಡ ಬಳ್ಳಾರಿ ಜಿಲ್ಲೆಯ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಅಂಗವಾಗಿ ಬಳ್ಳಾರಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ರವರು ಪರ ಮತಯಾಚನೆ ಮಾಡಲು ಆಗಮಿಸುತ್ತಿದ್ದಾರೆ. ಹೊಸಹಳ್ಳಿ ಪಟ್ಟಣದ ಹುಲಿಕೆರೆ ರಸ್ತೆಯ ಕೆಜಿ ಕಲ್ಲನಗೌಡ ರವರ ಜಮೀನಿನಲ್ಲಿ ಆಯೋಜಿಸಿರುವ ಬಹಿರಂಗ ಸಭೆಯಲ್ಲಿ ಪ್ರಚಾರ ನಡೆಸಲಿದ್ದಾರೆ. .ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ. ಜಿಲ್ಲಾ ಚುನಾವಣಾ ಉಸ್ತುವಾರಿ ರವಿಕುಮಾರ್. ಪ್ರಭಾರಿ ಚಂದ್ರಶೇಖರ ಅಲಗೇರಿ. ಎಸ್ ಟಿ ಮೋರ್ಚಾದ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು. ಇತರರು ಭಾಗವಹಿಸಲಿದ್ದಾರೆಂದು ಮಂಡಲದ ಅಧ್ಯಕ್ಷರಾದ ನಾಗರಾಜ್ ಬಣವಿಕಲ್ ತಿಳಿಸಿದ್ದಾರೆ.
ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್ ಕಾನಾ ಹೊಸಹಳ್ಳಿ.