ಕಾಂಗ್ರೇಸ್ ಗ್ಯಾರಂಟಿ ಕಾರ್ಡ್ ವಿತರಣೆ.

ದೇವರ ಹಿಪ್ಪರಗಿ ಏಪ್ರಿಲ್.18

ದೇವರ ಹಿಪ್ಪರಗಿ ಪಟ್ಟಣದಲ್ಲಿ ಇಂದು ಲೋಕಸಭೆ ಚುನಾವಣೆಯ ಗೋಸ್ಕರ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಕಾರ್ಡನ್ನು ಬಿಡುಗಡೆ ಮಾಡಿದೆ ರಾಜ್ಯದಲ್ಲಿ ಗ್ಯಾರಂಟಿಯ ಮೂಲಕ ಕಾಂಗ್ರೆಸ್ ಗೆ ಬಹುಮತ ಸಿಕ್ಕಿದೆ ಅದೇ ತರನಾಗಿ ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಮುಖಾಂತರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಗ್ಯಾರಂಟಿ ಕಾರ್ಡನ್ನು ಬಿಡುಗಡೆ ಮಾಡಿದೆ ,ದೇವರ ಹಿಪ್ಪರಗಿ ಪಟ್ಟಣದಲ್ಲಿ ಇಂದು ಮನೆ ಮನೆಗೆ ಹೋಗಿ ಮಹಿಳೆಯರಿಗೆ ಕಾಂಗ್ರೇಸ್ ಪಕ್ಷದ ಗ್ಯಾರಂಟಿ ವಿತರಣೆ ಮಾಡಿದರು, ಮಹಿಳೆಯರು ಗ್ಯಾರಂಟಿ ಕಾರ್ಡ್ ಪಡೆದು ಕಾಂಗ್ರೇಸ್ ಪಕ್ಷಕ್ಕೆ ನಮ್ಮ ಓಟು ಎನ್ನುವ ಮೂಲಕ ಕಾಂಗ್ರೇಸ್ ಪಕ್ಷಕ್ಕೆ ಜಯವಾಗಲಿ ಎಂದು ಜೈಕಾರ ಹಾಕಿದರು, ಮಹಿಳೆಯರು ಕಾಂಗ್ರೇಸ್ ಪಕ್ಷ ಗೆಲುವಿಗೆ ನಾವು ಸದಾ ಸಿದ್ದರಿದ್ದೇವೆ ಎಂದು ವಿಶ್ವಾಸ ನೀಡಿದರು.

ಹಸ್ತಕ್ಕೆ ಮತ ದೇಶಕ್ಕೆ ಹಿತವೆಂದು ಮಹಿಳೆಯರು ಜೈ ಘೋಷಣೆ ಹಾಕುವ ಮೂಲಕ ಹರ್ಷ ವ್ಯಕ್ತಪಡಿಸಿದರು, ಈ ಗ್ಯಾರಂಟಿ ಕಾರ್ಡ್ ವಿತರಣೆಯ ಸಂದರ್ಭದಲ್ಲಿ ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಪ್ರಭುಗೌಡ ಪಾಟೀಲ ಲಿಂಗದಳ್ಳಿ, ರಾಜ್ಯ ಯುವ ಕಾಂಗ್ರೇಸ್ ಜಂಟಿ ಕಾರ್ಯದರ್ಶಿಯಾದ ಸಂತೋಷ ದೊಡ್ಡಮನಿ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಬಶೀರ್ ಶೇಟ ಬೇಪಾರಿ ಸಂಗನಗೌಡ ಪಾಟೀಲ ಹರನಾಳ ಸರೀತಾ ನಾಯಕ ಪರಶುರಾಮ ದಿಂಡವಾರ ಹಾಗೂ ಕಾಂಗ್ರೇಸ್ ಮುಖಂಡರು, ಕಾರ್ಯಕರ್ತರು ಈ ಗ್ಯಾರಂಟಿ ಕಾರ್ಡ್ ವಿತರಣೆ ಸಮಯದಲ್ಲಿ ಉಪಸ್ಥಿತರಿದ್ದರು.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಭೀಮಪ್ಪ ಹಚ್ಯಾಳ ದೇವರ ಹಿಪ್ಪರಗಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button