ವ್ಯಕ್ತಿಗಿಂತ ಪಕ್ಷ ಮೊದಲು – ಕೋಟಾ ಶ್ರೀನಿವಾಸ್ ಪೂಜಾರಿ.

ತರೀಕೆರೆ ಏಪ್ರಿಲ್.18

ಜನರ ಭಾವನೆಗಳನ್ನು ತಿಳಿದುಕೊಂಡು ನರೇಂದ್ರ ಮೋದಿ ರವರಿಗೆ ಬೆಂಬಲಿಸ ಬೇಕಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಇಂದು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಹೇಳಿದರು. ದೇಶ ಪ್ರೇಮಿಗಳು ಭಾರತ ಮಾತಾ ಕಿ ಜೈ ಎಂದರೆ ಕರ್ನಾಟಕ ವಿಧಾನ ಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಎನ್ನುವ ಕೂಗು ಕೇಳ ಬೇಕಾಗಿದೆ. ಇದು ನಮ್ಮ ದೌರ್ಭಾಗ್ಯ, ವ್ಯಕ್ತಿಗಿಂತ ಪಕ್ಷ ಮೊದಲು, ದೇಶ ಮೊದಲು, ರಾಜ್ಯದಲ್ಲಿ 10.5 ಲಕ್ಷ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆ ಕೊಟ್ಟಿಲ್ಲ. ಕಳೆದ ಆರು ತಿಂಗಳಿನಿಂದ ಅಂಗವಿಕಲರ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ ಕೊಟ್ಟಿಲ್ಲ. ದೇಶ ಕಾಯ್ದ ನಿವೃತ್ತ ಸೈನಿಕ ಶ್ರೀನಿವಾಸ್ ರವರು ತಮ್ಮ ಒಂದು ತಿಂಗಳ ಪಿಂಚಣಿ 32 ಸಾವಿರ ರೂಗಳನ್ನು ಕೊಟ್ಟಿದ್ದಾರೆ. ಆದ್ದರಿಂದ ದೇಶ ರಕ್ಷಣೆಗಾಗಿ ಬಿಜೆಪಿಗೆ ಮತ ನೀಡಬೇಕು ಎಂದು ಹೇಳಿದರು. ಮಾಜಿ ಶಾಸಕ ಡಿ ಎಸ್ ಸುರೇಶ್ ಮಾತನಾಡಿ ಕೇಂದ್ರ ಸರ್ಕಾರದ ಅಮೃತ್ ಯೋಜನೆಯಿಂದ ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದೇವೆ. ನಗರೋಥಾನ ಯೋಜನೆಯಲ್ಲಿ ರಸ್ತೆ ಹಾಗೂ ಹಲವಾರು ಅಭಿವೃದ್ಧಿ ಕಾಮಗಾರಿಗಳು ಇಂದಿಗೂ ನಡೆಯುತ್ತಿವೆ ಅದು ಬಿಜೆಪಿ ಸರ್ಕಾರದಿಂದ ಆಗಿರುವ ಕಾಮಗಾರಿಗಳು. ನಾವೆಲ್ಲರೂ ನೆಮ್ಮದಿ ಜೀವನ ಮಾಡಲು ನರೇಂದ್ರ ಮೋದಿ ರವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕು ಎಂದು ಹೇಳಿದರು. ಮಾಜಿ ಶಾಸಕ ಎಸ್.ಎಂ ನಾಗರಾಜ್, ಅಜ್ಜಂಪುರದ ಎಂ ಕೃಷ್ಣಮೂರ್ತಿ, ಜೆಡಿಎಸ್ ತಾಲೂಕ್ ಅಧ್ಯಕ್ಷ ಎಂ ನರೇಂದ್ರ, ಪುರಸಭಾ ಸದಸ್ಯ ಟಿ.ಎಂ ಭೋಜರಾಜ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ಪ್ರತಾಪ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆಆರ್ ಧ್ರುವ ಕುಮಾರ್, ಎಸಿ ಚಂದ್ರಪ್ಪ, ಚೈತ್ರ ಶ್ರೀ ಮಾಲತೇಶ್, ರಾಜೇಶ್ವರಿ, ಆನಂದಪ್ಪ, ಬಿಜೆಪಿ ಜಿಲ್ಲಾ ಅಧ್ಯಕ್ಷ ದೇವರಾಜ ಶೆಟ್ಟಿ, ಕಲ್ಮರ್ಡಪ್ಪ , ನಗರ ಅಧ್ಯಕ್ಷ ರೇಣುಕಾ, ಶಿವಾನಂದ್, ಟಿ ಎಚ್ ಎಲ್ ರಮೇಶ್. ಮುಂತಾದವರು ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್.ವೆಂಕಟೇಶ್. ತರೀಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Your email address will not be published. Required fields are marked *

Back to top button