ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಈ. ತುಕಾರಾಮ್ ಗೆಲುವು ಶತಸಿದ್ಧ – ಸಂತೋಷ್ ಎಸ್ ಲಾಡ್.

ಕಾನಾ ಹೊಸಹಳ್ಳಿ ಏಪ್ರಿಲ್.19

ಈ ದೇಶದ ಸಂವಿಧಾನ ಉಳಿವಿಗಾಗಿ ನಾವೆಲ್ಲರೂ ಹೋರಾಟ ಮಾಡಬೇಕು ದೇಶದಲ್ಲಿ 10 ವರ್ಷದಿಂದ ಸರ್ವಾಧಿಕಾರಿ ಧೋರಣೆ ನಡೆಯುತ್ತಿದೆ ಎಂದು ಸಚಿವ ಸಂತೋಷ್ ಲಾಡ್ ಕರೆ ನೀಡಿದರು. ಪಟ್ಟಣದ ಶ್ರೀ ಮಾರಿಕಾಂಬಿಕಾ ದೇವಿಯ ದ್ವಾರ ಬಾಗಿಲು ಮುಂಭಾಗದಲ್ಲಿ ಹಮ್ಮಿಕೊಂಡ ಬಳ್ಳಾರಿ ಲೋಕಸಭಾ ಚುನಾವಣೆ ಅಭ್ಯರ್ಥಿ ಈ ತುಕಾರಾಮ್ ಅವರ ಬಹಿರಂಗ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದರು. 2014 ರ ಮೊದಲು ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವ ಮುಂಚೆ ಸ್ವೀಸ್ ಬ್ಯಾಂಕ್‌ನಿಂದ ಹಣ ತಂದು ಪ್ರತಿಯೊಬ್ಬರ ಖಾತೆಗೆ ₹ 15 ಲಕ್ಷ, ಪ್ರತಿ ವರ್ಷ ಯುವಕರಿಗೆ 2 ಕೋಟಿ ಉದ್ಯೋಗ ನೀಡುತ್ತೇನೆ. ರೈತರ ಸಾಲ ಮನ್ನಾ ಹಾಗೂ ರೈತರ ಆದಾಯ ದ್ವಿಗುಣ ಗೊಳ್ಳಿಸುತ್ತೇನೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿ ಈ ವರೆಗೂ ಈಡೇರಿಸಿಲ್ಲ. ಅಧಿಕಾರಕ್ಕೆ ಬಂದ ನಂತರ ಪ್ರತಿ ವಸ್ತುಗಳ ಬೆಲೆ ಏರಿಕೆಯಾಗಿ ಬಡವರು, ಕೂಲಿ ಕಾರ್ಮಿಕರು ಬದುಕುವುದು ಕಷ್ಟವಾಗಿದೆ.

2016 ರಲ್ಲಿ ನರೇಂದ್ರ ಮೋದಿ ಅವರು ಕಪ್ಪು ಹಣ ವೈಟ್ ಮಾಡುತ್ತೇನೆ ಎಂದು ರಾತ್ರೋ ರಾತ್ರಿ ನೋಟು ಬ್ಯಾನ್ ಮಾಡಿದಾಗ ಬಡವರು, ರೈತರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತು ನೋಟು ಬದಲಾವಣೆ ಮಾಡುವಾಗ ಎಷ್ಟು ಜನರು ಪ್ರಾಣ ಕಳೆದು ಕೊಂಡರು. ಪೆಟ್ರೋಲ್, ಡಿಸೇಲ್ ರೇಟ್ ಕಡಿಮೆ ಆಗಿದೆಯಾ.? ಚುನಾವಣೆ ಬಂದಾಗ ಒಂದು ಅಜೆಂಡಾ ಸೆಟ್ ಮಾಡ್ತಾರೆ. ಅಧಿಕಾರ ಇದೆ ಎಂದು ದುರುಪಯೋಗ ಮಾಡಬಾರದು. ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆ ಅನುಷ್ಠಾನ ಗೊಳಿಸಿ ನುಡಿದಂತೆ ನಡೆದಿದ್ದು ಕಾಂಗ್ರೆಸ್ ಸರ್ಕಾರ ಬೆಂಬಲಿಸಿ ಎಂದು ಮತದಾರರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಎನ್ ಟಿ ಶ್ರೀನಿವಾಸ್ ಮಾತನಾಡಿ ಲೋಕಸಭೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಈ ತುಕಾರಾಮ್ ಅವರು ಗೆಲ್ಲುವುದು ನಿಶ್ಚಿತ, ಇದರಲ್ಲಿ ಯಾವ ಸಂಶಯವೂ ಇಲ್ಲ. ಇವರ ಬೆನ್ನಿಗೆ ನಮ್ಮ ಗ್ಯಾರಂಟಿಗಳ ಅಭಯವಿದೆ. ರಾಜ್ಯ ಸರಕಾರದ ಜನಪರ ಆಡಳಿತದ ಬೆಂಬಲವಿದೆ. ಚುನಾವಣೆಯಲ್ಲಿ ಧೈರ್ಯವಾಗಿ ಮತ ಕೇಳುವ ನೈತಿಕ ಹಕ್ಕು ನಮಗಿದೆ. ಪಕ್ಷದ ಎಲ್ಲರೂ ಸಂಘಟಿತರಾಗಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದ್ದೇವೆ. ಬಹು ವರ್ಷಗಳ ನಂತರ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಗೆಲ್ಲುವ ಕಾಲ ಕೂಡಿ ಬಂದಿದೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತುಕರಾಮ್ ಮಾತನಾಡಿ ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್‌ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ, ಶಾಲಾ-ಕಾಲೇಜುಗ ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ ಮರೆತಿಲ್ಲ. ಆದರೆ, 10 ವರ್ಷದಲ್ಲಿ ಬಿಜೆಪಿ ಏನು ಮಾಡಿದೆ’ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಭೀಮ ನಾಯ್ಕ್. ಎನ್‌.ಟಿ ತಮ್ಮಣ್ಣ, ಶಶಿಧರ್ ಸ್ವಾಮಿ, ಎಸ್ ವೆಂಕಟೇಶ್, ನಾಗಮಣಿ ಜಿಂಕಲ್, ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕುಮಾರ್ ಗೌಡ್ರು, ಗುಂಡುಮುಣುಗು ತಿಪ್ಪೇಸ್ವಾಮಿ, ಎಸಿ ಚೆನ್ನಬಸಪ್ಪ. ಏನ್ ದುಗ್ಗಪ್ಪ. ಉಮೇಶ್, ನೂರು ಅಹ್ಮದ್, ಕಾವಲಿ ಶಿವಪ್ಪ ನಾಯಕ, ಜಿ ಓಬಣ್ಣ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ವೈಯಂ ವೀರೇಶ್ವರಯ್ಯ. ಗುಂಡುಮುಣುಗು ಮಂಜುನಾಥ, ಗ್ರಾ‌‌.ಪಂ ಅಧ್ಯಕ್ಷ ಎಸಿ ಚೇತನ್, ಯುವ ಮುಖಂಡ ಸೂರ್ಯಪ್ರಕಾಶ್. ಪಿ ಎಲ್ ಬ್ಯಾಂಕಿನ ಮಾಜಿ ಅಧ್ಯಕ್ಷ ಸತೀಶ್ ಎಚ್ ಬಿ. ಎಳೆನೀರು ಗಂಗಣ್ಣ, ಬಿಟಿ ಗುದ್ದಿ ದುರುಗೇಶ್, ನಾಗೇಶ್, ಮನೋಜ್ ಕುಮಾರ್, ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು, ಮಹಿಳೆಯರು ಉಪಸ್ಥಿತರಿದ್ದರು‌.

ಹೋಬಳಿ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್.ವೀರೇಶ್ ಕಾನಾ ಹೊಸಹಳ್ಳಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button