ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮತದಾನ ಜಾಗೃತಿ.

ಹುನಗುಂದ ಏಪ್ರಿಲ್.26

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಾ ಪಂಚಾಯತಿ ಆವರಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮತದಾನ ಜಾಗೃತಿ ಜಾಥಾಗೆ ಕಾರ್ಯನಿರ್ವಾಹಕ ಅಧಿಕಾರಿ ತಾರಾ ಎನ್ ಹಾಗೂ ಪುರಸಭೆ ಮುಖ್ಯಾಧಿಕಾರಿ ಪಿ. ಕೆ ಗುಡದಾರಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಅವರು ಚಾಲನೆ ನೀಡಿದರು.ಈ ಜಾಥಾವೂ ತಾಲೂಕ ಪಂಚಾಯತಿ ಕಚೇರಿಯಿಂದ ನಗರದ ಸರ್ಕಲ್ ವರೆಗೂ ಜಾಥಾ ನಡೆಯಿತು. ಬಳಿಕ ಮಾನವ ಸರಪಳಿ ಮೂಲಕ ಮತದಾನ ಅರಿವು ಮೂಡಿಸಲಾಯಿತು. ಕಾರ್ಯನಿರ್ವಾಹಕ ಅಧಿಕಾರಿ ತಾರಾ ಎನ್ ಅವರು ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಬಳಿಕ ಮನೆ ಮನೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸಿದರು.ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ. ಐಇಸಿ ಸಂಯೋಜಕ ಬಸವರಾಜ ಕೊಪ್ಪದ. ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣಾಜಿ ಪವಾರ್ , MRW ಬೀರ್ ಗೊಂಡ, VRW ಗಳು ತಾಪಂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button