ತಪ್ಪದೆ ಮತ ಚಲಾಯಿಸಿ….!

ಪಿ.ಕೆ ನಾಗನೂರು ಮೇ.07

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿಕೆ ನಾಗನೂರಿನಲ್ಲಿ ಮಾಜಿ ಉಪಮುಖ್ಯಮಂತ್ರಿಗಳ ಅಥಣಿ ತಾಲೂಕಿನ ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರು ಶ್ರೀ ಚಿದಾನಂದ ಲಕ್ಷ್ಮಣ್ ಸವದಿ ತಮ್ಮ ಹಕ್ನ್ನು ಚಲಾಯಿಸಿದರು. ತಪ್ಪದೇ ಚಲಾಯಿಸಬೇಕು. ಇಂದು ನಾನು ಮತದಾನ ಮಾಡಿದ್ದೇನೆ ಮಾಡಿ ತಮ್ಮ ಸಂವಿಧಾನ ಬದ್ಧ ಹಕ್ಕನ್ನು ಚಲಾಯಿಸಬೇಕು ಎಂದು ಮನವಿ ಮಾಡಿದ ಅವರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ .ಸಾಲಿನಲ್ಲಿ ನಿಂತು ಭಾಗ ಸಂಖ್ಯೆ 204 ರಲ್ಲಿ ಮತ ಚಲಾವಣೆ ಚಲಾಯಿಸಿದರು. ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ತಪ್ಪದೇ ಭಾಗವಹಿಸಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.ಪ್ರಪಂಚದಲ್ಲಿ ಭಾರತ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ದೇಶ. ಭಾರತದ ಚುನಾವಣಾ ವ್ಯವಸ್ಥೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಬಣ್ಣಿಸಿದರು.ಮೊದಲ ಬಾರಿಗೆ ಮತದಾನದ ಹಕ್ಕು ಪಡೆದಿರುವ ಯುವ ಸಮೂಹ ಮತ್ತು ಯುವ ಪಡೆ ಮತದಾನದಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡು ತಪದೇ ಮತದಾನ ಮಾಡುವಂತೆ ಯುವ ಮತದಾರರಿಗೆ ಕರೆ ನೀಡಿದರು. ಮತದಾನ ಪ್ರಜಾಪ್ರಭುತ್ವದ ಹಬ್ಬ ಎಲ್ಲರೂ ತಪ್ಪದೇ ಮತದಾನ ಮಾಡಿರಿ ಎಂದರು.

ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ಎಂ.ಎಂ. ಶರ್ಮಾ ಬೆಳಗಾವಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button