ನರೇಗಾ ಕೂಲಿ ಕಾರ್ಮಿಕರಿಗೆ ಮತದಾನದ ಜಾಗೃತಿ.
ಹೀರೆಮಾಗಿ ಏಪ್ರಿಲ್.01

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದೊಡ್ಡ ಕೆರೆ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು. ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಸಹಾಯಕ ನಿರ್ದೇಶಕ ತಾರಾ ಎನ್ ಅವರು ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಿದರು.ಬಳಿಕ ಕೂಲಿ ಕಾರ್ಮಿಕರಿಗೆ ಕಾರ್ಯ ನಿರ್ವಾಹಕ ಅಧಿಕಾರಿಗಳು ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ (ಗ್ರಾ.ಉ) ಮಹಾಂತೇಶ್ ಕೋಟಿ, ಐಇಸಿ ಸಂಯೋಜಕ ಬಸವರಾಜ ಕೊಪ್ಪದ , ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣಾಜಿ ಪವಾರ್ , ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಕುಂತಲಾ ಮೇಟಿ, ತಾಂತ್ರಿಕ ಸಹಾಯಕ ಅಜಿತ್ ಕೊಣ್ಣೂರ , ಬಿಎಫ್ ಟಿ ಸಂತೋಷ್ ಅಕ್ಕಿ , ಡಾಟಾ ಎಂಟ್ರಿ ಆಪರೇಟರ್ ಗಂದೇಪ್ಪ, ಕಾಯಕ ಮಿತ್ರ ಮಹಾದೇವಿ ಬಿಸಿಲದಿನ್ನಿ , ರೋಜಗಾರ್ ಮಿತ್ರ ಕಾವೇರಿ ಚವ್ಹಾಣ , ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.