ಎಮ್.ಪಿ.ಎಸ್ ಶಾಲೆಯಲ್ಲಿ ಕನ್ನಡ – ರಾಜ್ಯೋತ್ಸವ ಆಚರಣೆ.
ಯಲಗೋಡ ನ.01

ದೇವರ ಹಿಪ್ಪರಗಿ ತಾಲ್ಲೂಕಿನ ಯಲಗೋಡ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಯಲ್ಲಿ ೬೯ ನೇ. ಕರ್ನಾಟಕ ರಾಜ್ಯೋತ್ಸವ ಸಮಾರಂಭ ನಮ್ಮ ಕನ್ನಡ ನಾಡನ್ನು ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಬೆಯ ನಾಡು, ತಾಯಿ ಭುವನೇಶ್ವರಿಯ ನಾಡು, ಎಂಬೆಲ್ಲಾ ಹೆಸರುಗಳಿಂದ ಕರೆಯುತ್ತೇವೆ. ಹಚ್ಚ ಹಸುರಿನ ಬೆಟ್ಟ ಗುಡ್ಡಗಳ, ವಿವಿಧ ನದಿಗಳು ಹರಿಯುವ, ಸಾಧು ಸಂತರು- ಶಿವಶರಣರು – ದಾಸರು – ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರಿಗೆ ಒಂದು ಧೀಮಂತ ಶಕ್ತಿ ಇದೆ. ಈ ಸುಂದರ ಸಮೃದ್ಧ ನಾಡಿನಲ್ಲಿ ಜನಿಸಿರುವುದು ನಮ್ಮೆಲ್ಲರ ಅದೃಷ್ಟ ಎಂದು ಯಲಗೋಡದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀ ಮಾಂತೇಶ ಕೂಟನೂರ ಅವರು ಗ್ರಾಮ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೬೯ ನೇ. ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು, ಗ್ರಾಮದ ಪಂಚಾಯತಿಯ ಸದಸ್ಯರು, ಪಿ.ಕೆ.ಪಿ.ಎಸ್ ಸದಸ್ಯರು ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಚರಣೆಯಲ್ಲಿ ಪಾಲ್ಗೊಂಡಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ