ಹುಣಶ್ಯಾಳ ಮಧ್ಯ ಮುಕ್ತ ಗ್ರಾಮವನ್ನಾಗಿ ಮಾಡಬೇಕು ಎಂದು ಗ್ರಾಮಸ್ಥರಿಂದ ಮನವಿ.

ಹುಣಶ್ಯಾಳ ಮೇ.23

ದೇವರ ಹಿಪ್ಪರಗಿ ತಾಲೂಕಿನ ಹುಣಶ್ಯಾಳ ಗ್ರಾಮಸ್ಥರು ಗ್ರಾಮದಲ್ಲಿ ಎಲ್ಲೆಂದರಲ್ಲಿ ಮಧ್ಯ ಮಾರಾಟ ವಾಗುತ್ತಿರುವುದರಿಂದ ಗ್ರಾಮದಲ್ಲಿ ಶಾಂತಿ, ನೆಮ್ಮದಿ ಇಲ್ಲದಂತಾಗಿದೆ ಎಂದು ಪ್ರತಿಭಟಿಸಿ ಮಧ್ಯ ಮುಕ್ತ ಗ್ರಾಮವನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ಕಲಕೇರಿ ಠಾಣೆಯ ಪಿಎಸ್‌ಐ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.ಗ್ರಾಮದಲ್ಲಿ ಸಂಜೆಯಿಂದ ರಾತ್ರಿವರೆಗೆ ಕುಡುಕರಹಾವಳಿ ಹೆಚ್ಚಾಗಿದ್ದು ಮಹಿಳೆಯರು ಮಕ್ಕಳು ನೆಮ್ಮದಿಯಿಂದ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಗ್ರಾಮಸ್ಥರೆಲ್ಲರೂ ಗ್ರಾಮವನ್ನು ಸಾರಾಯಿ ಮುಕ್ತ ಗ್ರಾಮ ಮಾಡಲು ನಿರ್ಧರಿಸಿದ್ದು ವಾರದಲ್ಲಿ ಸಂಬಂಧಪಟ್ಟ ಇಲಾಖೆಯವರು ಕ್ರಮ ಜರುಗಿಸದಿದ್ದರೆ ಮಹಿಳೆಯರೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಗ್ರಾಮದ ಕಿರಾಣಿ, ಚಹಾ ಅಂಗಡಿಗಳಲ್ಲೂ ಮಧ್ಯ ಮಾರಾಟವಾಗುತ್ತಿದೆ. ಸಂಬಂಧಪಟ್ಟ ಅಬಕಾರಿ ಇಲಾಖೆ ಕಾಣದಂತಿದ್ದು ಬೇಜಾವಾಬ್ದಾರಿ ಯಿಂದ ಗ್ರಾಮದಲ್ಲಿ ನಿತ್ಯ ತಂಟೆಗಳಾಗುತ್ತಿವೆ. ಕೂಡಲೇ ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕಿ ಮದ್ಯ ಮಾರಾಟ ಮಾಡದಂತೆ ಕ್ರಮ ಕೆಗೊಳ್ಳಬೇಕು ಎಂದು ಗ್ರಾಮದ ಮುಖಂಡರು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳಾದ ಅಹ್ಮದಸಾಬ ಜಾಡಗಾರ, ಪೀರಮಹೃದ ಸಿಪಾಯಿ, ಶಂಕ್ರಪ್ಪ ಬಂಗಾರಗುಂಡ, ಗುತ್ತಪ್ಪಗೌಡ ಕೋಟಿಖಾನಿ,ನಬಿಸಾಬ ತಾಳಿಕೋಟಿ, ಮಹಾಂತಪ್ಪ ಯಂಕಂಚಿ, ಶಫೀಕ್ ಸಿಪಾಯಿ, ಮುದುಕಪ್ಪ ಕರ್ನಾಳ, ರಹಿಮಾನ್ ಸಿಪಾಯಿ, ಮಹ್ಮದ್ ಬಾಗವಾನ, ಇಬ್ರಾಹಿಂ ಹವಾಲ್ದಾರ್,ಮೈನು ಬಾಗವಾನ ಸೇರಿದಂತೆ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ಭೀಮಪ್ಪ. ಹಚ್ಯಾಳ ದೇವರ ಹಿಪ್ಪರಗಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button