ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ “ಆರೋಗ್ಯ ಅರಿವು” ಜಾಗೃತಿ.

ಶಿರೂರು ಆ.08

ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಾಗಲಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರ ಸಹಯೋಗದಲ್ಲಿ, ಬೆನಕಟ್ಟಿ ಉಪ ಕೇಂದ್ರ ವ್ಯಾಪ್ತಿಯ, ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ, “ಆರೋಗ್ಯ ಅರಿವು ಜಾಗೃತಿ” ಆಯೋಜಿಸಲಾಗಿತ್ತು. ಪ್ರಾಸ್ತಾವಿಕವಾಗಿ ಆರೋಗ್ಯ ನಿರೀಕ್ಷಣಾಧಿಕಾರಿ, ಎಸ್ ಅಂಗಡಿಯವರು, ಮಳೆಗಾಲದಲ್ಲಿ ಸಾಂಕ್ರಾಮಿಕವಾಗಿ ರೋಗಗಳ ತಡೆಗೆ ಮುಂಜಾಗ್ರತೆ ಕ್ರಮಗಳ ಪಾಲನೆ ಮಾಡಬೇಕು.ಸೊಳ್ಳೆ ಉತ್ಪತ್ತಿ ತಾಣಗಳು ಬೆಳೆಯದಂತೆ ನೋಡಿ ಕೊಳ್ಳಬೇಕು “ಈಡೀಜ್ ಇಜಿಪ್ತೆ” ಉತ್ಪತ್ತಿ ತಾಣಗಳು ನಿರ್ಮೂಲನೆ ಮಾಡಬೇಕು. ನೀರಿನ ಸಂಗ್ರಹಗಳ ಮೇಲೆ ತಪ್ಪದೇ ಮುಚ್ಚಳಿಕೆ ಹಾಕಬೇಕು.ಸುತ್ತ ಮುತ್ತ ಪರಿಸರ ಸ್ವಚ್ಛತೆ ಕಾಪಾಡಿ ಕೊಳ್ಳಬೇಕು.ಸೊಳ್ಳೆಗಳ ಕಡಿತದಿಂದ ಮಲೇರಿಯಾ , ಡೆಂಗ್ಯೂ, ಚಿಕೂನ್ ಗುನ್ಯಾ, ಆನೆಕಾಲು ರೋಗ ಮೆದುಳು ಜ್ವರ, ಸಾಂಕ್ರಾಮಿಕವಾಗಿ ಒಬ್ಬರಿಂದ ಒಬ್ಬರಿಗೆ ಹರಡುತ್ತವೆ, ಸಾಂಕ್ರಾಮಿಕ ರೋಗಗಳ ತಡೆಗೆ, ಸೊಳ್ಳೆ ಉತ್ಪತ್ತಿ ತಾಣಗಳು ಬೆಳೆಯದಂತೆ ನೋಡಿ ಕೊಳ್ಳಬೇಕು. ಸೊಳ್ಳೆ ಪರದೆ ನಿರೋಧಕ ಬಳಸಬೇಕು, ವಾಂತಿ ಬೇಧಿ ತಡೆಗೆ ಶುದ್ಧ ನೀರು ಸೇವನೆ ಮಾಡಬೇಕು, ಕೈಗಳ ಶುಚಿತ್ವ ಕಾಪಾಡಿ ಕೊಳ್ಳಬೇಕು. ಯಾವುದೇ ತರಹ ಜ್ವರ ಕಾಣಿಸಿದರೆ ಹತ್ತಿರದ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಚಿಕಿತ್ಸೆ ಉಚಿತ ವಾಗಿರುತ್ತದೆ. ವೈಯಕ್ತಿ ಸ್ವಚ್ಛತೆ,ಶುದ್ಧ ನೀರು ಸೇವನೆ ಮಾಡಬೇಕು. ವಸತಿ ಶಾಲಾ ಆವರಣದಲ್ಲಿ “ಈಡೀಜ್ ಇಜಿಪ್ತೆ” ಲಾರ್ವಾ ಉತ್ಪತ್ತಿ ತಾಣಗಳ ಸಮೀಕ್ಷೆ ಮಾಡಿ ಲಾರ್ವಾ ತಾಣಗಳ ಖಾಲಿ ಮಾಡಿಸಲಾಯಿತು. ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲಾ ಆರೋಗ್ಯ ಅರಿವು ಜಾಗೃತಿ ಕಾರ್ಯಕ್ರಮದಲ್ಲಿ ಶಾಲಾ ಶೂಷಶ್ರಣಾಧಿಕಾರಿ ಸಿರಿಯನ್ ದರ್ವೆಶಿ, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button